ಕೇಂದ್ರದ ಮನೆ ಹಂಚಿಕೆಯಲ್ಲಿ
ತಾರತಮ್ಯ
ಉಪವಾಸ ಸತ್ಯಾಗ್ರಹದ
ಎಚ್ಚರಿಕೆ ನೀಡಿದ ವಿನಾಯಕ ತುಪ್ಪದಮನೆ
ತೀರ್ಥಹಳ್ಳಿ ತಾಲ್ಲೂಕಿನ
ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾಮಾನ್ಯ ವರ್ಗದ ಬಡವರು, ಹಿಂದುಳಿದ ವರ್ಗ, ಅಲ್ಪಸಂಖ್ಯಾತರಿಗೆ
ಹಂಚಿಕೆಗಾಗಿ ಕೇಂದ್ರ ಸರ್ಕಾರ ಮಂಜೂರು ಮಾಡಿದ ಮನೆಗಳಲ್ಲಿ ತಾರತಮ್ಯ ನೀತಿ ಅನುಸರಿಸಲಾಗಿದೆ. ಶಾಸಕರು
ಮನೆ ಹಂಚಿಕೆಯಲ್ಲಿ ಮಲತಾಯಿ ಧೋರಣೆ ಅನುಸರಿಸಿದ್ದು ಅನ್ಯಾಯವನ್ನು ಖಂಡಿಸಿ ಪ್ರತಿಭಟಿಸುವುದಾಗಿ ಹೊದಲ-ಅರಳಾಪುರ
ಗ್ರಾಮ ಪಂಚಾಯಿತಿ ಸದಸ್ಯ ವಿನಾಯಕ ಎಂ ಎಚ್ಚರಿಸಿದ್ದಾರೆ.
ತಾಲ್ಲೂಕಿನಲ್ಲಿರುವ
ಕೆಲವು ಗ್ರಾಮ ಪಂಚಾಯಿತಿಗಳಿಗೆ ತಮ್ಮ ಪ್ರಭಾವ ಬಳಸಿ ಸರ್ಕಾರದಿಂದ 100 ಮನೆಗಳನ್ನು ಹಂಚಿಕೆ ಮಾಡಿದ್ದಾರೆ.
ಹೊದಲ-ಅರಳಾಪುರ ಗ್ರಾಮ ಪಂಚಾಯಿತಿಗೆ ಕೇವಲ ಒಂದು ಮನೆಯನ್ನು ಮಾತ್ರ ನೀಡಿದ್ದಾರೆ. ಇದೇ ರೀತಿ ಅನೇಕ
ಪಂಚಾಯಿತಿಯಲ್ಲಿ ತಾರತಮ್ಯ ಧೋರಣೆ ಅನುಸರಿಸಿದ್ದಾರೆ. ಕೆಲವು ಗ್ರಾಮ ಪಂಚಾಯಿತಿಗೆ ಹೆಚ್ಚಿಗೆ ಮನೆಗಳನ್ನು
ಹಂಚುತ್ತಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದ್ದಾರೆ.
ಈಗಾಗಲೇ ಪಂಚಾಯಿತಿ
ವ್ಯಾಪ್ತಿಯಲ್ಲಿ 150ಕ್ಕೂ ಹೆಚ್ಚು ನಾಗರೀಕರು ಅಧಿಕೃತವಾಗಿ ಅರ್ಜಿ ಸಲ್ಲಿಸಿರುತ್ತಾರೆ. ಕೂಡಲೇ ಅಧಿಕಾರಿಗಳಿಗೆ
ಸೂಚನೆ ನೀಡಿ ಹೆಚ್ಚಿನ ಮನೆಗಳನ್ನು ಮಂಜೂರು ಮಾಡಿಸಬೇಕು. ಇಲ್ಲದಿದ್ದರೆ ಶಾಸಕರ ಮಲತಾಯಿ ಧೋರಣೆ ಖಂಡಿಸಿ
ಕಿಮ್ಮನೆ ರತ್ನಾಕರ, ಆರ್.ಎಂ. ಮಂಜುನಾಥ ಗೌಡ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಪ್ರಕಟಣೆಯಲ್ಲಿ
ಎಚ್ಚರಿಸಿದ್ದಾರೆ.