ಸಂತೆಹಕ್ಕಲು ಲಕ್ಷ್ಮಮ್ಮ ನಿಧನ

ಸಂಬಾ ನಾಗೇಂದ್ರ ಅವರಿಗೆ ಮಾತೃ ವಿಯೋಗ


ತೀರ್ಥಹಳ್ಳಿ ತಾಲ್ಲೂಕಿನ ಸಂತೆಹಕ್ಕಲು ಲಕ್ಷ್ಮಮ್ಮ (90) ಬೆಂಗಳೂರಿನಲ್ಲಿ ಬುಧವಾರ ನಿಧನರಾದರು. ಅವರಿಗೆ ಮೂವರು ಗಂಡು, ಓರ್ವ ಹೆಣ್ಣು ಮಕ್ಕಳು ಇದ್ದಾರೆ.

ಪುತ್ರರಾದ ನಾಗರಾಜ್‌ ಪ್ರಗತಿಪರ ಕೃಷಿಕರು, ಸಂಬಾ ನಾಗೇಂದ್ರ ಪ್ರಗತಿಪರ ಚಿಂತಕರಾಗಿದ್ದು ಸಾಮಾಜಿಕ ಚಟುವಟಿಕೆಯಲ್ಲಿ ತಮ್ಮನ್ನು ಸಕ್ರೀಯವಾಗಿ ತೊಡಗಿಸಿಕೊಂಡಿದ್ದಾರೆ. ಮತ್ತೋರ್ವ ಸಹೋದರ ನರೇಂದ್ರ ಎಸ್.ಬಿ. ಅವರು ಕೆಎಎಸ್‌ ಅಧಿಕಾರಿಯಾಗಿದ್ದು‌ ಸಚಿವ ಎಂ.ಬಿ.ಪಾಟೀಲ್ ಅವರ ಆಪ್ತ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಪುತ್ರಿ ಲೀಲಾವತಿ ಬೆಂಗಳೂರಿನಲ್ಲಿ ನೆಲೆಸಿದ್ದು ಅವರ ಇಬ್ಬರು ಗಂಡು ಮಕ್ಕಳನ್ನು ಲಕ್ಷ್ಮಮ್ಮ ಅಕ್ಕರೆಯಿಂದ ಆರೈಕೆ ಮಾಡಿದ್ದಾರೆ. ಇವರ ಗರಡಿಯಲ್ಲಿ ಬೆಳೆದ ಮೊಮ್ಮಕ್ಕಳಾದ ಮಧುಕರ ಎನ್. ಡಿಆರ್‌ಡಿಓ ದಲ್ಲಿ ವಿಜ್ಞಾನಿಯಾಗಿದ್ದಾರೆ. ಮನೋಹರ ಎನ್. ಹಾಸನ ಮಹಿಳಾ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಅಂತ್ಯಕ್ರಿಯೆ ಗುರುವಾರ ಸಂತೇಹಕ್ಕಲು ಗ್ರಾಮದಲ್ಲಿ ನಡೆಯಿತು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post