ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನಕ್ಕೆ ನೇಮಕ

ಬಿ.ಎಲ್.ಶಂಕರ್‌ ಅಧ್ಯಕ್ಷ, ಕಡಿದಾಳು ಪ್ರಕಾಶ್ ಸಮಕಾರ್ಯದರ್ಶಿ
ನೂತನ ಸದಸ್ಯರಾಗಿ ಸಾಹಿತಿ ಶಿವಾನಂದ ಕರ್ಕಿ ಆಯ್ಕೆ

ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳಿಯ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ನೂತನ ಪದಾಧಿಕಾತಿಗಳನ್ನು ಮುಂದಿನ ಮೂರು ವರ್ಷದ ಅವಧಿಗೆ ನೇಮಿಸಿ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.

ಪ್ರತಿಷ್ಠಾನದ ಅಧ್ಯಕ್ಷರಾಗಿ ಡಾ.ಬಿ.ಎಲ್.ಶಂಕರ್‌, ಪದನಿಮಿತ್ತ ಕಾರ್ಯದರ್ಶಿಯಾಗಿ ಶಿವಮೊಗ್ಗ ಜಿಲ್ಲಾಧಿಕಾರಿ, ಸಮಕಾರ್ಯದರ್ಶಿಯಾಗಿ ಕಡಿದಾಳ್‌ ಪ್ರಕಾಶ್‌, ಖಜಾಂಚಿತಾಗಿ ಡಿ.ಎಂ.ಮನುದೇವ್‌ ನೇಮಕಗೊಂಡಿದ್ದಾರೆ.

ಸದಸ್ಯರಾಗಿ ಸಾಹಿತಿ ಶಿವಾನಂದ ಕರ್ಕಿ, ಸಿ.ಬಸವಲಿಂಗಯ್ಯ, ಎಸ್.ವಿ.ದಯಾನಂದ, ಡಾ.ಚಿದಾನಂದಗೌಡ, ಎಂ.ಸಿ.ನರೇಂದ್ರ ನೇಮಕವಾಗಿದ್ದಾರೆ. ಪದನಿಮಿತ್ತ ಸದಸ್ಯರಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ  ನಿರ್ದೇಶಕರು, ಶಿವಮೊಗ್ಗ ಉಪ ಅರಣ್ಯ ಸಂಕ್ಷಣಾಧಿಕಾರಿ, ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷರು, ಲೋಕೋಪಯೋಗಿ ಇಲಾಖೆ ಶಿವಮೊಗ್ಗ ವೃತ್ತ ಅಧೀಕ್ಷಕ ಇಂಜಿನಿಯರ್‌, ಪ್ರವಾಸೋದ್ಯಮ ಇಲಾಖೆ ನಿರ್ದೇಶಕರು, ಸರ್ಕಾರದ ಆರ್ಥಿಕ ಇಲಾಖೆ ಕಾರ್ಯದರ್ಶಿ, ಶಿವಮೊಗ್ಗ-ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಅಧ್ಯಕ್ಷರು, ಆಹ್ವಾನಿತ ಸದಸ್ಯರಾಗಿ ತೀರ್ಥಹಳ್ಳಿ ಕ್ಷೇತ್ರದ ಶಾಸಕರು, ಹಂಪಿ ಕನ್ನಡ ವಿವಿ ಕುಲಪತಿ, ತೀರ್ಥಹಳ್ಳಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷರನ್ನು ನೇಮಿಸಿ ಆದೇಶಿಸಲಾಗಿದೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post