ಕಾನೂನು ಸೇವಾ ಪ್ರಾಧಿಕಾರದಿಂದ ಕಾನೂನು ಅರಿವು ಶಿಬಿರ
ರಾಷ್ಟ್ರೀಯ, ರಾಜ್ಯ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಗಳು ತಾಲ್ಲೂಕು ಕಾನೂನು ಸೇವಾ ಸಮಿತಿ ತೀರ್ಥಹಳ್ಳಿ, ಅಭಿಯೋಜಕರು ಮತ್ತು ವಕೀಲರ ಸಂಘ ತೀರ್ಥಹಳ್ಳಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸೀಬಿನಕೆರೆ ಇವರುಗಳ ಸಹಯೋಗದಲ್ಲಿ ಇತ್ತೀಚೆಗೆ ಮಕ್ಕಳ ದಿನಾಚರಣೆ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ ನಿರ್ಮೂಲನೆಗಾಗಿ ಅಂತರಾಷ್ಟ್ರೀಯ ದಿನ ಕಾರ್ಯಕ್ರಮ ಯಶಸ್ವಿಯಾಗಿ ಸೀಬಿನಕೆರೆಯಲ್ಲಿ ನಡೆಯಿತು.
ಕಾರ್ಯಕ್ರಮವನ್ನು
ಹಿರಿಯ ವ್ಯವಹಾರಿಕ ನ್ಯಾಯಾಧೀಶರಾದ ಗೀತಾಮಣಿಯವರು ಉದ್ಘಾಟಿಸಿ ಮಕ್ಕಳ ದಿನಾಚರಣೆ ಮಹತ್ವ ಮತ್ತು ಮಹಿಳೆಯರ
ಮೇಲಾಗುತ್ತಿರುವ ದೌರ್ಜನ್ಯ ಕುರಿತು ತಮ್ಮ ಅಭಿಪ್ರಾಯ ಮಂಡಿಸಿದರು. ವಕೀಲರ ಸಂಘದ ಅಧ್ಯಕ್ಷ ಎಂ.ಎನ್.ರಮೇಶ್
ಮಾಜಿ ಪ್ರಧಾನಿ ಜವಹಾರಲಾಲ್ ನೆಹರು ಅವರ ಮಕ್ಕಳ ಮೇಲಿನ ಪ್ರೀತಿ ಮತ್ತು ರಾಷ್ಟ್ರದ ಕುರಿತ ಅವರ ದೂರದೃಷ್ಟಿಯ
ಬಗ್ಗೆ ವಿವರಿಸಿದರು.
ಕಾರ್ಯಕ್ರಮದಲ್ಲಿ
ಸಹಾಯಕ ಸರ್ಕಾರಿ ಅಭಿಯೋಜಕಿ ರೇಖಾ ಎನ್.ಬಿ., ಪಟ್ಟಣ ಪಂಚಾಯಿತಿ ಸದಸ್ಯರಾದ ರತ್ನಾಕರ ಶೆಟ್ಟಿ, ಎಸ್ಡಿಎಂಸಿ
ಅಧ್ಯಕ್ಷರಾದ ರಾಜೇಶ್ ಟಿ.ಎನ್. ಮತ್ತಿತರರು ಮಾತನಾಡಿದರು.
ಕಾರ್ಯಕ್ರಮದ ನಿರೂಪಣೆಯನ್ನು
ಸಹ ಶಿಕ್ಷಕ ಮಹಬಲೇಶ್ವರ ಹೆಗಡೆ ಹಾಗೂ ವಂದನಾರ್ಪಣೆಯನ್ನು ಸಹ ಶಿಕ್ಷಕಿ ಇಂದಿರಮ್ಮ ನೆರವೇರಿಸಿದರು.

