ಶವದ ಬಳಿ ಇದ್ದ ಡೆತ್ ನೋಟ್ ಪೊಲೀಸರ ವಶಕ್ಕೆ
ನೇಣು ಬಿಗಿದ ಸ್ಥಿತಿಯಲ್ಲಿ ನವ ವಿವಾಹಿತೆ ಶ್ರೀನಿಧಿ (24) ಶವ ಗುರುವಾರ ತೀರ್ಥಹಳ್ಳಿ ತಾಲ್ಲೂಕಿನ ಬೆಟ್ಟಮಕ್ಕಿಯ ಮನೆಯೊಳಗೆ ಪತ್ತೆಯಾಗಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಕುಕ್ಕಂದೂರು ಗ್ರಾಮದ ಶ್ರೀನಿಧಿ ವರ್ಷದ ಹಿಂದೆ ಬೆಟ್ಟಮಕ್ಕಿಯ ಸುದೀಪ್ ಶೆಟ್ಟಿ ಅವರೊಂದಿಗೆ ಒಂದು ವರ್ಷ ಒಂದು ತಿಂಗಳ ಹಿಂದೆ ವಿವಾಹವಾಗಿದ್ದರು.
ಆರೋಗ್ಯ ಸರಿ ಇಲ್ಲದೆ ಕುಟುಂಬದವರಿಗೆ ತೊಂದರೆಯಾಗುತ್ತಿದೆ. ಅದಕ್ಕಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿಟ್ಟ ಡೆತ್ ನೋಟ್ ಸಿಕ್ಕಿದೆ ಎನ್ನಲಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಸ್ಪತ್ರೆಯ ಮರಣೋತ್ತರ ಪರೀಕ್ಷೆ ಸ್ಥಳಕ್ಕೆ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
