ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಮುನ್ನೂರು ಜಗನಾಥ್ ಪೂಜಾರಿ ನಿಧನ

ಹಿರಿಯ ಕಾಂಗ್ರೆಸ್ ಮುಖಂಡರು ಮತ್ತು ಮೇಲಿನ ಕುರುವಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಮುನ್ನೂರು ಜಗನ್ನಾಥ ಪೂಜಾರಿ ನಿನ್ನೆ ರಾತ್ರಿ ಕಷ್ಟ
ಖಾಸಗಿ ಆಸ್ಪತ್ರೆಯಲ್ಲಿ ನಿಧನ ರಾದರು.
ಅವರಿಗೆ 67 ವರ್ಷ ವಯಸಾಗಿತ್ತು.
ಕಾಲೇಜು ದಿನಗಳಲ್ಲಿ ಅವರು ಮೈಸೂರು ಯೂನಿವರ್ಸಿಟಿ ಮಟ್ಟದ ಕಬಡ್ಡಿ ಆಟಗಾರನಾಗಿ ಹೆಸರು ಮಾಡಿದ್ದರು. ತೀರ್ಥಹಳ್ಳಿಯ ಪ್ರಸಿದ್ದ ಯುವಕ ಸಂಘಗಳಲ್ಲಿ ಒಂದಾಗಿದ್ದ ಶ್ರೀ ಗಜಾನನ ಯುವಕ ಸಂಘ ಹುಣಸವಳ್ಳಿಯನ್ನು 80 ದಶಕದಲ್ಲಿ ಸ್ಥಾಪಿಸಿ ಅದನ್ನು ಪ್ರಮುಖವಾಗಿ ರೂಪಿಸುವಲ್ಲಿ ಅವರ ಪಾತ್ರ ಪ್ರಮುಖವಾಗಿತ್ತು. ಈ ಸಂಘದ ಮೂಲಕ ಅವರು ಭೂತದ ಕೋಲ ಜಾನಪದ ಕಲೆಯನ್ನು ತೀರ್ಥಹಳ್ಳಿಯಲ್ಲಿ ಮೊದಲ ಸಲ ರಂಗದ ಮೇಲೆ ಪ್ರಯೋಗಿಸಿದ್ದರು. ಉತ್ತಮ ಆಡಳಿತಗಾರನಾಗಿದ್ದ ಅವರು ಮೇಲಿನ ಕುರುವಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದಾಗ ನಿರ್ಮಲ ಗ್ರಾಮ ರಾಷ್ಟೀಯ ಪುರಸ್ಕಾರಕ್ಕೆ ಗ್ರಾಮ ಪಂಚಾಯತ್ ಪಾತ್ರವಾಗಿತ್ತು. ಸಹಕಾರಿಯಾಗಿ ಕೂಡ ಅವರು ಗುರುತಿಸಿಕೊಂಡಿದ್ದರು. ಮೂರು ಬಾರಿ ಅವರು ಕಸಬಾ ಸೊಸೈಟಿ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದರು.
ಅವರು ಮಗಳು, ಮೊಮ್ಮಕ್ಕಳು, ಹಾಗೂ ಅಪಾರ ಬಂಧುವರ್ಗವನ್ನು ಅಗಲಿದ್ದಾರೆ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post