ಮಾಳೂರು ವೃತ್ತ ನಿರೀಕ್ಷಕ ಶ್ರೀಧರ್ ಕೆ. ಅಯ್ಕೆ
2024ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕ ಪೊಲೀಸ್ ಅಧಿಕಾರಿ / ಸಿಬ್ಬಂದಿಗಳಿಗೆ ಘೋಷಿಸಲಾಗಿದ್ದು ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ವೃತ್ತ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಶ್ರೀಧರ್ ಕೆ. ಅವರನ್ನು ಆಯ್ಕೆ ಮಾಡಿ ಸರ್ಕಾರದ ಒಳಾಡಳಿತದ ಅಪರ ಮುಖ್ಯ ಕಾರ್ಯದರ್ಶಿ ಎಂ.ಧನಂಜಯ ಅದೇಶಿಸಿದ್ದಾರೆ.
ಶ್ರೀಧರ್ ಮಾಳೂರು ವೃತ್ತ ನಿರೀಕ್ಷಕರಾಗಿದ್ದು ಅವರ ಅಧೀನದಲ್ಲಿ ಮಾಳೂರು ಮತ್ತು ಆಗುಂಬೆ ಪೊಲೀಸ್ ಠಾಣೆ ಇದೆ. ಸಿಬ್ಬಂದಿಗಳೊಂದಿಗೆ ಸೌಜನ್ಯಯುತವಾಗಿರುವ ಅವರ ಬಗ್ಗೆ ಸಿಬ್ಬಂದಿ ವರ್ಗದಲ್ಲಿ ಉತ್ತಮ ಅಭಿಪ್ರಾಯಗಳು ಇವೆ. ಬಂದೋಬಸ್ತ್ ಮುಂತಾದ ಕಠಿಣ ಸಂದರ್ಭದಲ್ಲಿಯೂ ಸಿಬ್ಬಂದಿಗಳ ಮಾನಸಿಕ ಸ್ಥೈರ್ಯವನ್ನು ಹೆಚ್ಚಿಸುವ ನಿಪುಣತೆಯನ್ನು ಹೊಂದಿದ್ದಾರೆ. ಸೌಜನ್ಯಯುತವಾಗಿ ಸಿಬ್ಬಂದಿಗಳ ಜೊತೆ ಕರ್ತವ್ಯಕ್ಕೆ ಅಣಿಯಾಗುತ್ತಾರೆಂಬ ಅಭಿಪ್ರಾಯಗಳು ಇವೆ.