7ನೇ ತರಗತಿ ವಿದ್ಯಾರ್ಥಿನಿ ನೇಣಿಗೆ ಶರಣು

ಅಂಕ ಕಡಿಮೆ ಬಂದಿದ್ದರಿಂದ ನೊಂದ ಬಾಲಕಿ
ಬಸವಾನಿಯ ಹೊಳೆಕೊಪ್ಪದಲ್ಲಿ ಘಟನೆ

ವಿಜ್ಞಾನ ವಿಷಯದಲ್ಲಿ ಎರಡು ಅಂಕಿ ಕಡಿಮೆ ಬಂದಿದ್ದರಿಂದ 7ನೇ ತರಗತಿ ವಿದ್ಯಾರ್ಥಿನಿ ಇಂಚನ ಎಚ್.ಆರ್.‌ (13) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಹೃದಯ ವಿದ್ರಾವಕ ಘಟನೆ ಹೊಳೆಕೊಪ್ಪ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಇಂಚನ ಬಸವಾನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ಉತ್ತಮವಾಗಿಯೇ ವ್ಯಾಸಂಗ ಮಾಡುತ್ತಿದ್ದಳು. ಮಂಗಳವಾರ ಎಲ್ಲಾ ವಿದ್ಯಾರ್ಥಿಗಳಿಗೂ ಸಮುದಾಯದತ್ತ ಕಾರ್ಯಕ್ರಮದ ಹಿನ್ನಲೆಯಲ್ಲಿ ಅಂಕಪಟ್ಟಿ ವಿತರಿಸಿದ್ದರು. ಪೋಷಕರೊಂದಿಗೆ ಬಾಲಕಿ ಕೂಡ ಅಂಕಪಟ್ಟಿ ಪಡೆದಿದ್ದು ವಿಜ್ಞಾನ ವಿಷಯದಲ್ಲಿ ಕಡಿಮೆ ಅಂಕ ಬಂದಿದೆ ಎಂದು ನೊಂದುಕೊಂಡಿದ್ದಳು.

ಪೋಷಕರು ವಿದ್ಯಾರ್ಥಿನಿಯನ್ನು ಹೊಳೆಕೊಪ್ಪದ ಮನೆಯಲ್ಲಿ ಬಿಟ್ಟು ತೀರ್ಥಹಳ್ಳಿಗೆ ತೆರಳಿದ್ದರು. ಮನೆಯಲ್ಲೇ ಇದ್ದ ವಿಕಲಚೇತನ ಸೋದರಿ ಪೋಷಕರಿಗೆ ಫೋನ್‌ ಮೂಲಕ ವಿಷಯ ತಿಳಿಸಿ ತಕ್ಷಣಕ್ಕೆ ಬರುವಂತೆ ಹೇಳಿದ್ದಾಳೆ. ಪೋಷಕರು ಬಂದು ವಿದ್ಯಾರ್ಥಿನಿಯ ನೇಣು ಬಿಚ್ಚಿ ಆಸ್ಪತ್ರೆಗೆ ಕೊಂಡೊಯ್ದಿದ್ದರು. ಆದರೆ ಮಾರ್ಗ ಮಧ್ಯೆಯೇ ಬಾಲಕಿ ಅಸುನೀಗಿದ್ದಾಳೆ.

ಬಾಲಕಿ ಹೊಳೆಕೊಪ್ಪ ಗ್ರಾಮದ ರಾಘವೇಂದ್ರ ಮತ್ತು ಮಾಲಿನಿ ದಂಪತಿಗಳ ಪುತ್ರಿ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post