ಒಂದೇ ಮನೆಯಲ್ಲಿ ಇಬ್ಬರಿಗೆ ಕೆಎಫ್ ಡಿ ದೃಢ
ಮಣಿಪಾಲ ಆಸ್ಪತ್ರೆಯಲ್ಲಿ ಬಾಲಕ ಸಾವು
ಮಂಗನ ಕಾಯಿಲೆಗೆ 7 ವರ್ಷದ ಬಾಲಕ ಮೃತಪಟ್ಟ ಧಾರುಣ ಘಟನೆ ತೀರ್ಥಹಳ್ಳಿ ತಾಲ್ಲೂಕಿನ ದತ್ತರಾಜಪುರ ಗ್ರಾಮದಲ್ಲಿ ಗುರುವಾರ ನಡೆದಿದೆ.
15 ದಿನಗಳ ಹಿಂದೆ ದತ್ತರಾಜಪುರ ಗ್ರಾಮದ ರಾಮು ಮತ್ತು ಸವಿತ ದಂಪತಿಯ ಮಕ್ಕಳಿಗೆ ಮಂಗನಕಾಯಿಲೆ ದೃಢಪಟ್ಟಿತ್ತು.
ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಯಲ್ಲಿ ರಚಿತ್ ಗೆ 4 ದಿನಗಳ ಕಾಲ ಚಿಕಿತ್ಸೆ ಕೊಡಿಸಲಾಗಿತ್ತು. ನಂತರ 12 ದಿನಗಳ ಕಾಲ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರ ರಾತ್ರಿ 9 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ. ಬಾಲಕಿ ಚೇತರಿಸಿಕೊಂಡಿದ್ದಾರೆ. ರಚಿತ್ ಕೋಣಂದೂರಿನ ನವಜ್ಯೋತಿ ಶಾಲೆಯಲ್ಲಿ 2ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು.
.jpg)