ತುಂಬು ಜೀವನ ನಡೆಸಿದ್ದ ಚಂದ್ರಮ್ಮ ನಿಧನ

ನೆಂಪೆ ದೇವರಾಜ್‌ಗೆ ಮಾತೃ ವಿಯೋಗ

ತೀರ್ಥಹಳ್ಳಿ ತಾಲ್ಲೂಕಿನಲ್ಲಿ ರೈತ ಸಂಘ ಮತ್ತು ಪ್ರಗತಿಪರ ಹೋರಾಟಗಳಿಗೆ ಪ್ರೇರಕ ಶಕ್ತಿಯಾಗಿ ಕಾರ್ಯ ನಿರ್ವಹಿಸಿದ್ದ ಕೃಷಿಕರಾದ ಚಂದ್ರಮ್ಮ (86) ಸೋಮವಾರ ಹಾರೋಗೊಳಿಗೆಯ ಸ್ವಗೃಹದಲ್ಲಿ ನಿಧನರಾದರು. ಹಲವು ದಿನಗಳಿಂದ ಆರೋಗ್ಯ ಸಮಸ್ಯೆಗೆ ಒಳಗಾಗಿದ್ದ ಅವರು ವಾರದ ಹಿಂದಿನಿಂದ ಚಿಕಿತ್ಸೆಗೆ ಸ್ಪಂದಿಸುತ್ತಿರಲಿಲ್ಲ.

ಅತಿಥಿ ಆರೈಕೆಯಲ್ಲಿ ಖುಷಿ ಪಡುತ್ತಿದ್ದ ಅವರು ಮನೆಗೆ ಆಗಮಿಸುತ್ತಿದ್ದ ಯಾವುದೇ ಅತಿಥಿಗಳನ್ನು ತಕ್ಷಣಕ್ಕೆ ಕಳುಹಿಸಿಕೊಡುವುದೆಂದರೆ ಅವರಿಗೆ ಬಹಳ ಬೇಸರದ ಸಂಗತಿಯಾಗಿತ್ತು. ಹತ್ತಿರದವರು ಎಂದಾದರೆ ಅವರನ್ನು ಬಿಟ್ಟುಕೊಡುತ್ತಿರಲಿಲ್ಲ. ಕಾಫಿ, ತಿಂಡಿ ಸೇವೆ ಕೊಡುವಂತೆ ಮಕ್ಕಳಿಗೆ ಹೇಳುತ್ತಿದ್ದರು. ಆಗಿನ ಕಾಲದ ಬಡತನದ ನಡುವೆಯೂ ಅತ್ಯಂತ ಶಿಸ್ತು ಜೀವನ ಅವರ ಗುರಿಯಾಗಿತ್ತು.

ಚಂದ್ರಮ್ಮ ಅವರಿಗೆ ಪ್ರಗತಿಪರ ಚಿಂತಕ, ಸಾಹಿತಿ ನೆಂಪೆ ದೇವರಾಜ್‌, ಪುತ್ರಿ ಇಂದ್ರಮ್ಮ ಇದ್ದಾರೆ. ಅಂತ್ಯಕ್ರಿಯೆ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಹಾರೋಗೊಳಿಗೆಯಲ್ಲಿ ನಡೆಯಲಿದೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post