ಕೃತಕ ಬುದ್ಧಿಮತ್ತೆಗೆ ಸಂಬಂಧಿಸಿದ ರಾಷ್ಟ್ರಮಟ್ಟದ ಸ್ಪರ್ಧೆ

ಅಂತಃಕರಣನ ತಂಡಕ್ಕೆ ಪ್ರಥಮ ಸ್ಥಾನ


ಸಾಫ್ಟ್ ವೇರ್ ಉದ್ಯಮಜಗತ್ತಿನ ದೈತ್ಯಕಂಪನಿಗಳಲ್ಲೊಂದಾದ ಅಮೇರಿಕದ  ಸಿಸ್ಕೊ ಕಂಪನಿ ಏರ್ಪಡಿಸಿದ್ದ  ಕೃತಕ ಬುದ್ಧಿಮತ್ತೆಗೆ  (ಆರ್ಟಿಫಿಷಿಯಲ್ ಇಂಟಲಿಜೆನ್ಸ್) ಸಂಬಂಧಿಸಿದ ರಾಷ್ಟ್ರಮಟ್ಟದ ‘ಸಿಸ್ಕೊ ಫೋರ್ಕಾಸ್ಟ್ ಲೀಗ್ ಇಂಡಿಯಾ ಸ್ಪರ್ಧೆ’ಯಲ್ಲಿ ವಿದ್ಯಾರ್ಥಿ ಅಂತಃಕರಣನ ತಂಡ  ಪ್ರಥಮ ಸ್ಥಾನ ಗಳಿಸಿದೆ. ಅಂತಃಕರಣನ ತಂಡದಲ್ಲಿ ವಿದ್ಯಾರ್ಥಿಗಳಾದ ಆರ್ಯನ್ ಎಂ ಮತ್ತು ಸ್ಮಿತಾ ಇದ್ದರು.

ಮೊದಲ ಸುತ್ತಿನಲ್ಲಿ ಒಟ್ಟು ಮೂರು ಮಂದಿ ವಿದ್ಯಾರ್ಥಿಗಳಿರುವ 450 ತಂಡಗಳು ಭಾಗವಹಿಸಿದ್ದು ಇವುಗಳಲ್ಲಿ ಅಂತಿಮ ಸ್ಪರ್ಧೆಗೆ ಆರು ತಂಡಗಳು ಆಯ್ಕೆಯಾದವು. ತುರುಸಿನ ಅಂತಿಮ ಸ್ಪರ್ಧೆಯಲ್ಲಿ ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ  ತೃತೀಯ ವರ್ಷದ ವಿದ್ಯಾರ್ಥಿ ಅಂತಃಕರಣನ ತಂಡ ಪ್ರಥಮ ಸ್ಥಾನ ಗಳಿಸಿದ್ದು, ಬೆಂಗಳೂರಿನ ಬಿ.ಎಂ.ಎಸ್ ಕಾಲೇಜು ಮತ್ತು ಆರ್.ವಿ ಕಾಲೇಜಿನ ವಿದ್ಯಾರ್ಥಿಗಳು ಕ್ರಮವಾಗಿ ದ್ವಿತೀಯ ಮತ್ತು ತೃತೀಯ ಸ್ಥಾನ ಗಳಿಸಿದರು.

ಬಹುಮಾನವಾಗಿ ತಂಡಗಳಿಗೆ ಪ್ರಶಸ್ತಿ ಪತ್ರ ಹಾಗು  ಒಟ್ಟು ಅಂದಾಜು ಒಂದು ಲಕ್ಷ ಮೌಲ್ಯದ ಕಂಪ್ಯೂಟರ್ ಗೆ ಸಂಬಂಧಿಸಿದ  ಉತ್ಪನ್ನಗಳನ್ನು ನೀಡಲಾಯಿತು.  ಪ್ರಶಸ್ತಿ ವಿಜೇತ ಅಂತಃಕರಣ ತೀರ್ಥಹಳ್ಳಿಯ ಹರಳಿಮಠ ಮೂಲದವವರಾಗಿದ್ದು ಲೇಖಕರಾಗಿಯೂ ಗುರುತಿಸಿಕೊಂಡಿದ್ದಾರೆ.


ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post