ಮಹಿಷಿ ಉತ್ತರಾದಿ ಮಠದಲ್ಲಿ ಕಳ್ಳತನ

ಮುಸುಕಿ ಹಾಕಿಕೊಂಡ ಬಂದ 10ಕ್ಕೂ ಹೆಚ್ಚು ದರೋಡೆಕೋರರು
ತೀರ್ಥಹಳ್ಳಿ ತಾಲ್ಲೂಕಿನ ಮಹಿಷಿ ಉತ್ತರಾದಿ ಮಠದಲ್ಲಿ ತಡರಾತ್ರಿ ಕಳ್ಳತನ ನಡೆದಿದೆ. ರಾತ್ರಿ ಮಠಕ್ಕೆ ನುಗ್ಗಿದ ಮಂಕಿಕ್ಯಾಪ್ ಧರಿಸಿದ 10ಕ್ಕೂ ಹೆಚ್ಚು ದರೋಡೆಕೋರರು ಲಾಂಗು, ಮಚ್ಚು ತೋರಿಸಿ ಹೆದರಿಸಿರುವ ಪ್ರಕರಣ ನಡೆದಿದೆ.
ಮಠದಲ್ಲಿ ಇದ್ದ ಒಂದು ಲ್ಯಾಪ್ ಟಾಪ್, 50,000 ನಗದು, 4 ಮೊಬೈಲ್ ಕಿತ್ತುಕೊಂಡು ತೆರಳಿದ್ದಾರೆ. ಅದೃಷ್ಟವಶಾತ್ ಯಾವುದೇ ಹಾನಿ ಸಂಭವಿಸಿಲ್ಲ. ಚಿನ್ನಾಭರಣಗಳ ಕಳ್ಳತನ ನಡೆಯಲಿಲ್ಲ ಎಂದು ತಿಳಿದು ಬಂದಿದೆ.
ವಿಷಯ ತಿಳಿಯುತ್ತಿದ್ದಂತೆ ಮಾಳೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದ್ದಾರೆ.
ಭಾನುವಾರ ಬೆಳಿಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿದ್ದು ವಿಚಾರಣೆ ನಡೆಸಿದ್ದಾರೆ.
ಸಿಸಿಟಿವಿ ಕ್ಯಾಮೆರಾ ಕೂಡ ಕಿತ್ತುಕೊಂಡು ಹೋಗಿದ್ದಾರೆಂಬ ಮಾಹಿತಿ ಲಭ್ಯವಾಗಿದ್ದು ದರೋಡೆಯಲ್ಲಿ ಸ್ಥಳೀಯರ ಕೈವಾಡ ಇದೆ ಎಂದು ಹೇಳಲಾಗುತ್ತಿದೆ.
ಈ ಸಂಬಂಧ ಮಾಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಸಕ ಆರಗ ಜ್ಞಾನೇಂದ್ರ ಭೇಟಿ ನೀಡಿ ಮಠದ ಪ್ರಮುಖರಿಗೆ ಧೈರ್ಯ ಹೇಳಿದರು.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post