ತೀರ್ಥಹಳ್ಳಿ ಕೃಷಿಕರ ಸೌಹಾರ್ದ ಸಹಕಾರಿ ಸಂಘದ (ಟಾಸ್) ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲ ಕವಿತ ಎಂ ಜೊಯ್ಸ್ (41) ಅನಾರೋಗ್ಯದಿಂದ ಮಂಗಳವಾರ ರಾತ್ರಿ ನಿಧನರಾದರು.
ಪಟ್ಟಣದ ಬಾಳೆಬೈಲು ಬಡಾವಾಣೆ ನಿವಾಸಿಯಾಗಿದ್ದ ಇವರು ಪತಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಬುಧವಾರದಂದು ಕನ್ನಂಗಿಯಲ್ಲಿ ನೆರವೇರಿತು.
ಇವರ ನಿಧನಕ್ಕೆ ಟಾಸ್ ಸಂಸ್ಥೆ ಅಧ್ಯಕ್ಷ, ಶಾಸಕ ಆರಗ ಜ್ಞಾನೇಂದ್ರ ಟಾಸ್ ಸಂಸ್ಥೆಯ ನಿರ್ದೇಶಕರು ಸಂತಾಪ ಸೂಚಿಸಿದ್ದಾರೆ.
