ಗುತ್ತಿಯಡೇಹಳ್ಳಿ ಸಮೀಪ ಒಂಟಿ ಕಾಡಾನೆ ಪ್ರತ್ಯಕ್ಷ

ಸಾರ್ವಜನಿಕರು, ವಾಹನ ಸವಾರರು ಎಚ್ಚರಿಕೆ !!!
ಸೀಕೆ, ಕಾವೇರಿ, ಬೈಲುಬಡಿಗೆ, ಕುಡುವಳ್ಳಿ, ಕುಚ್ಚಲು, ಮಳಗಾರು ಗ್ರಾಮದಲ್ಲಿ ಕಟ್ಟೆಚ್ಚರ


ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಂಟಿ ಕಾಡಾನೆ ಕಾಣಿಸಿಕೊಂಡಿದೆ. ಶುಕ್ರವಾರ ಬೆಳಿಗ್ಗೆ ಮುಡುಬದಲ್ಲಿ ಕಾಣಿಸಿಕೊಂಡಿದ್ದ ಆನೆ ಇಂದು ಕುಚ್ಚಲು, ಮಳಗಾರು ಬಳಿ ಕಾಣಿಸಿಕೊಂಡಿತ್ತು. ಶನಿವಾರ ರಾತ್ರಿ ಸೀಕೆ, ಕಾವೇರಿ, ಬೈಲುಬಡಿಗೆ, ಕುಡುವಳ್ಳಿ, ಮಳಗಾರು ಸಮೀಪ ಓಡಾಟ ಆರಂಭಿಸಿದ್ದು ವಾಹನ ಸವಾರರು ಎಚ್ಚರಿಕೆಯಿಂದ ಓಡಾಡಬೇಕಿದೆ.
ಅರಣ್ಯ ಇಲಾಖೆ ಆನೆ ಬಂದ ದಾರಿಯ ಮೂಲಕ ಭದ್ರಾ ಅಭಯಾರರಣ್ಯಕ್ಕೆ ಅಟ್ಟುವ ಕೆಲಸದಲ್ಲಿ ನಿರತರಾಗಿದ್ದಾರೆ. ತೀರ್ಥಹಳ್ಳಿ- ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿಯೂ ಸಂಚರಿಸುವ ವಾಹನ ಸವಾರರು ಜಾಗರೂಕತೆಯಿಂದ ವಾಹನ ಚಾಲನೆ ಮಾಡಬೇಕಿದೆ. ಗ್ರಾಮೀಣ ಭಾಗದಲ್ಲಿ ಓಡಾಡುವ ಪ್ರತಿಯೊಬ್ಬರು ವಿನಾಕಾರಣ ಮನೆಯಿಂದ ಹೊರಗೆ ಹೋಗದಂತ ಕಟ್ಟೆಚ್ಚರ ನೀಡಲಾಗಿದೆ. ಆನೆ ಬಂದ ದಾರಿಯನ್ನು ಹುಡುಕುತ್ತಲಿದ್ದು ಯಾವುದೇ ಕಾರಣಕ್ಕೆ ಆನೆಗೆ ತೊಂದರೆ ನೀಡದಂತೆ ಸಾರ್ವಜನಿಕರಲ್ಲಿ ಅರಣ್ಯ ಇಲಾಖೆ ಮನವಿ ಮಾಡಿದೆ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post