ಕಾಂತಾರ ಸಿನಿಮಾ ಹಿನ್ನೆಲೆ ಆಗುಂಬೆಯಲ್ಲಿದ್ದ ನಿಜು
ಆಸ್ಪತ್ರೆಗೆ ಕೊಂಡೊಯ್ಯುವಾಗ ಹೃದಯಾಘಾತಕ್ಕೆ ಸಾವು
ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆಯ ಹೋಂಸ್ಟೇ ಒಂದರಲ್ಲಿ ಕೇರಳದ ತ್ರಿಶೂರ್ ಮೂಲದ ಮಿಮಿಕ್ರಿ ಕಲಾವಿದ ನಿಜು ವಿ.ಕೆ. ಕೆಲವು ದಿನಗಳಿಂದ ಕಾಂತಾರ ಚಿತ್ರೀಕರಣಕ್ಕಾಗಿ ತಂಗಿದ್ದರು. ಬುಧವಾರ ರಾತ್ರಿ ಏಕಾಏಕಿ ವಸತಿಗೃಹದಲ್ಲಿ ಎದೆನೋವು ಕಾಣಿಸಿಕೊಂಡಿದೆ. ಅಲ್ಲಿಂದ ತಕ್ಷಣ ತೀರ್ಥಹಳ್ಳಿ ಆಸ್ಪತ್ರೆಗೆ ಕೊಂಡೊಯ್ಯುವಾಗ ಮಾರ್ಗ ಮಧ್ಯೆ ಅಸು ನೀಗಿದ್ದಾರೆ.
ಮೃತದೇಹವನ್ನು ತೀರ್ಥಹಳ್ಳಿಯ ಜೆ.ಸಿ. ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಕುಟುಂಬಸ್ಥರು ಕೇರಳದಿಂದ ಆಗಮಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.