ಮಾಜಿ ಜನತಾದಳ ರಾಜ್ಯ ಉಪಾಧ್ಯಕ್ಷರಾಗಿದ್ದ ರಾಜೇಂದ್ರ
ಹಿರಿಯ ಜೆಡಿಎಸ್ ಪ್ರಭಾವಿ ಮುಖಂಡ, ಮಾಜಿ ರಾಜ್ಯ ಜನತಾದಳ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಎನ್ ಆರ್ ಪುರ ತಾಲ್ಲೂಕಿನ ಮಡಬೂರು ರಾಜೇಂದ್ರ (70) ಭಾನುವಾರ ನಿಧನರಾದರು. 2004ರಲ್ಲಿ ಶೃಂಗೇರಿ ತಾಲ್ಲೂಕಿನ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಮಲೆನಾಡ ಗಾಂಧಿ ಗೋವಿಂದೇಗೌಡರ ಜೊತೆ ನಿಕಟವರ್ತಿಯಾಗಿದ್ದರು. ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅತ್ಮೀಯ ವಲಯದಲ್ಲಿ ಗುರುತಿಸಿಕೊಂಡಿದ್ದ ಅವರು ಶೃಂಗೇರಿ ಕ್ಷೇತ್ರದಲ್ಲಿ ಪಕ್ಷ ಸಂಘಟನೆಗೆ ವಿಶೇಷ ಒತ್ತು ನೀಡಿದ್ದರು. ನಿರಂತರ ಹೋರಾಟದ ಮೂಲಕ ಜನಪರ ಚಳವಳಿ ಕಟ್ಟುತ್ತಿದ್ದರು. ಸಾಮಾಜಿಕ ನ್ಯಾಯ, ಸಮಾಜವಾದಿ ಸಿದ್ಧಾಂತವನ್ನು ನಂಬಿ ಬಂದಿದ್ದ ಅವರು ಜಿಲ್ಲಾ ಪಂಚಾಯಿತಿ ಸದಸ್ಯರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.
