ದೇವಸ್ಥಾನ ಸಮಗ್ರ ಅಭಿವೃದ್ಧಿಗೆ ಶ್ರಮ

ಶ್ರೀ ರಾಮೇಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷರಾಗಿ ಡಿ.ಎಸ್.ವಿಶ್ವನಾಥ ಶೆಟ್ಟಿ ಅವಿರೋಧ ಆಯ್ಕೆ

ತೀರ್ಥಹಳ್ಳಿಯ ಕ್ಷೇತ್ರ ದೇವತೆ ಶ್ರೀ ರಾಮೇಶ್ವರ ದೇವಸ್ಥಾನಕ್ಕೆ ನೂತನ ಸಮಿತಿ ಅಸ್ಥಿತ್ವಕ್ಕೆ ಬಂದಿದ್ದು ಸಮಿತಿಯ ಅಧ್ಯಕ್ಷರಾಗಿ ಡಿ.ಎಸ್.ವಿಶ್ವನಾಥ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸೋಮವಾರ ಮಧ್ಯಾಹ್ನ ಶ್ರೀ ರಾಮೇಶ್ವರ ಸಭಾಭವನದಲ್ಲಿ ಸದಸ್ಯ ಎಚ್.ಆರ್. ಮಹಾಬಲ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ವಾನುಮತದಿಂದ ವಿಶ್ವನಾಥ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಯಿತು.

ಸದಸ್ಯರಾಗಿ ಪ್ರಧಾನ ಅರ್ಚಕ ರಾಜಶೇಖರ ಭಟ್, ಎಚ್.ಆರ್. ಮಹಾಬಲ, ಪೂರ್ಣೇಶ ಎಸ್, ಜ್ಯೋತಿ ರವಿ, ತ್ರಿವೇಣಿ ಸುರೇಶ್, ಹಾಲಿಗೆ ನಾಗರಾಜ್, ಶಶಿಧರ ಎಚ್.., ಎಸ್.ಪ್ರದೀಪ್ ಮುಂದಿನ ಮೂರು ವರ್ಷಗಳ ಅವಧಿಗೆ ಜಿಲ್ಲಾಧಿಕಾರಿ ಆದೇಶದಂತೆ ನೇಮಕ ಮಾಡಲಾಗಿದೆ.

ಸಂದರ್ಭದಲ್ಲಿ ಮಾತನಾಡಿದ ಡಿ.ಎಸ್.ವಿಶ್ವನಾಥ ಶೆಟ್ಟಿ, ದೇವಾಲಯದ ಸಮಗ್ರ ಅಭಿವೃದ್ಧಿಗೆ ಸಮಿತಿಯು ಪ್ರಾಮಾಣಿಕವಾಗಿ ಶ್ರಮಿಸಲಿದೆ. ಮುಂದಿನ ದಿನಗಳಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ ದೇವಾಲಯದ ಪೌಳಿಯ ಸುತ್ತಲೂ ಮೇಲ್ಛಾವಣಿಯನ್ನು ನಿರ್ಮಿಸಲು ಆಲೋಚಿಸಲಾಗಿದೆ. ಅಲ್ಲದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳನ್ನು ಆಕರ್ಶಿಸುವ ಸಲುವಾಗಿ ವಿವಿಧ ಸಮಿತಿಗಳನ್ನು ಒಗ್ಗೂಡಿಸಿ ರೂಪುರೇಶೆ ಸಿದ್ಧಪಡಿಸಲಾಗುವುದು. ನೂತನ ಸಮಿತಿ ವ್ಯಾಪ್ತಿಯಲ್ಲಿ ದೇವಸ್ಥಾನದ ಆಡಳಿತ ನಿರ್ವಹಣೆಯ ಸಂಪೂರ್ಣ ಜವಾಬ್ದಾರಿ ಇರುತ್ತದೆ ಎಂದರು. ಸಂದರ್ಭದಲ್ಲಿ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾದ ವರಲಕ್ಷ್ಮಿ ಮತ್ತು ನಾಗಭೂಷಣ್ ಉಪಸ್ಥಿತರಿದ್ದರು. ಸಭೆಯ ಬಳಿಕ ನೂತನ ಸಮಿತಿ ವತಿಯಿಂದ ತುಂಗಾನದಿಗೆ ಬಾಗಿನ ಸಮರ್ಪಣೆ ಮಾಡಲಾಯಿತು.


ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post