ತೀರ್ಥಹಳ್ಳಿಯ 6 ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ

ವಿಶೇಷ ಶಿಕ್ಷಕ ಪ್ರಶಸ್ತಿಗೆ ಅರವಿಂದ್ ಟಿ.ಎನ್. ಆಯ್ಕೆ
ಶಿವಮೊಗ್ಗ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಆದೇಶ
ತೀರ್ಥಹಳ್ಳಿ ತಾಲ್ಲೂಕಿನ ಕಮ್ಮರಡಿ ವಿಶ್ವತೀರ್ಥ ಅನುದಾನಿತ ಶಾಲೆಯ ಚಿತ್ರಕಲಾ ಶಿಕ್ಷಕ, ರಂಗ ಕಲಾವಿದ, ಗಾಯಕ, ರಂಗ ವಿನ್ಯಾಸಗಾರ ಅರವಿಂದ್ ಟಿ.ಎನ್. ಈ ಬಾರಿಯ ಜಿಲ್ಲಾ ಮಟ್ಟದ ವಿಶೇಷ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಶಿವಮೊಗ್ಗ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಆದೇಶ ಗುರುವಾರ ಪ್ರಕಟಗೊಂಡಿದ್ದು ತಾಲ್ಲೂಕಿನ ಆರು ಶಿಕ್ಷಕರಿಗೆ 2025-26ನೇ ಸಾಲಿನ ಶಿಕ್ಷಕ ದಿನಾಚರಣೆಯ ಆಂಗವಾಗಿ ಅತ್ಯುತ್ತಮ ಶಿಕ್ಷಕ, ಶಿಕ್ಷಕಿ ಪ್ರಶಸ್ತಿ ಲಭಿಸಿದೆ.

ಬಾಳೆಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಜ್ಯೋತಿ ಹೆಚ್.ಎಂ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಡ್ತಿ ಮುಖ್ಯ ಶಿಕ್ಷಕಿ ಸುಮ ಹೆಚ್.ಎಂ., ಹುಂಚದಕಟ್ಟೆ ಸರ್ಕಾರಿ ಪ್ರೌಢಶಾಲೆಯ ಕೃಷ್ಣಪ್ಪ ಡಿ ಅವರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ, ಶಿಕ್ಷಕಿ ಪ್ರಶಸ್ತಿ ಲಭಿಸಿದೆ.

ಕುಡುಮಲ್ಲಿಗೆ ಸರ್ಕಾರಿ ಹಿರಿಯ ಪ್ರಾಥಮಕ ಶಾಲೆಯ ಬಡ್ತಿ ಮುಖ್ಯ ಶಿಕ್ಷಕಿ ಅಶಾಬಿ ಕೆ, ಸರ್ಕಾರಿ ಪ್ರೌಢಶಾಲೆ ತೂದೂರು ಸಹ ಶಿಕ್ಷಕ ಗೋಪಿ ವಿ ಅವರಿಗೆ ವಿಶೇಷ ಶಿಕ್ಷಕ ಪ್ರಶಸ್ತಿಗೆ ಲಭಿಸಿದೆ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post