ಶ್ರೀಧರ್‌ ಅಡಿಗ, ಬಿ.ಜಿ.ಪ್ರಕಾಶ್‌ ಇನ್ನು ನೆನಪು ಮಾತ್ರ

ಎರಡು ದಿನಗಳ ಅಂತರದಲ್ಲಿ ಗೆಳೆಯರಿಬ್ಬರ ನಿಧನ

ಸಹಪಾಠಿ ಗೆಳೆಯರಿಬ್ಬರು ಕೇವಲ ಎರಡು ದಿನಗಳ ಅಂತರದಲ್ಲಿ ಅಗಲಿದ್ದಾರೆ. ಎರಡು ದಿನಗಳ ಹಿಂದೆ ಚಿಕ್ಕಮಗಳೂರು ಜಿಲ್ಲಾ ಅಂಚೆ ಕಚೇರಿಯಲ್ಲಿ ಪೋಸ್ಟ್‌ ಮಾಸ್ಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಬಿ.ಜಿ.ಪ್ರಕಾಶ್‌ (53) ಶ್ವಾಸಕೋಶದ ಸೋಂಕಿನಿಂದ ಶಿವಮೊಗ್ಗದ ಮೆಟ್ರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ. ಇವರು ತುಂಗಾ ಕಾಲೇಜಿನ ಹಳೆಯ ವಿದ್ಯಾರ್ಥಿ. ಬಿ.ಜಿ. ಪ್ರಕಾಶ್‌ ಹಾಗೂ ಮಗಳು ಮತ್ತು ಅಪಾರ ಬಂಧು ವರ್ಗವನ್ನು ಅಗಲಿದ್ದಾರೆ.

ಶಿವಮೊಗ್ಗದಲ್ಲಿ ಅರ್ಚಕರಾಗಿ ಜನಪ್ರಿಯರಾಗಿದ್ದ ಶ್ರೀಧರ್‌ ಅಡಿಗ (53) ಇಂದು ಮುಂಜಾನೆ ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಶ್ರೀಧರ್‌ ಅಡಿಗ ಅವಿವಾಹಿತರಾಗಿದ್ದು ಇಲ್ಲಿನ ಮೇಳಿಗೆ ಗ್ರಾಮದವರಾಗಿದ್ದಾರೆ. ಇವರು ಪ್ರೌಢಶಿಕ್ಷಣವನ್ನು ತೀರ್ಥಹಳ್ಳಿಯ ಯು.ಆರ್.ಅನಂತಮೂರ್ತಿ ಸರ್ಕಾರಿ ಶಾಲೆಯಲ್ಲಿ ಮತ್ತು ಬಿಕಾಂ ಪದವಿಯನ್ನು ತುಂಗಾ ಮಹಾವಿದ್ಯಾಲಯದಲ್ಲಿ ಪೂರೈಸಿದ್ದರು. ಬಳಿಕ ಶೃಂಗೇರಿಯ ಶಾರದ ಪೀಠದಲ್ಲಿ ಶಾಸ್ತ್ರೀಯವಾಗಿ ಪೌರೋಹಿತ್ಯ ಅಭ್ಯಾಸ ಮಾಡಿ ಅರ್ಚಕರಾಗಿದ್ದರು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post