ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೇಯಸ್ ಆರೋಗ್ಯ ವಿಚಾರಿಸಿದ ಬಿ.ವಿ ಶ್ರೀನಿವಾಸ್
ತೀರ್ಥಹಳ್ಳಿ ತಾಲೂಕು ಯುವ ಕಾಂಗ್ರೆಸ್ ನಗರ ಬ್ಲಾಕ್ ಅಧ್ಯಕ್ಷರಾದ ಶ್ರೇಯಸ್ ರಾವ್ ಅವರು ಇತ್ತೀಚಿಗೆ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದು, ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ. ಇಂದು ಪಟ್ಟಣದ ಸೀಬಿನಕೆರೆಯ ಅವರ ನಿವಾಸಕ್ಕೆ ಮಾಜಿ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಆದರ್ಶ್ ಹುಂಚದಕಟ್ಟೆ, ತಾಲೂಕು ಕಾಂಗ್ರೆಸ್ ನಗರ ಬ್ಲಾಕ್ ಪ್ರಧಾನ ಕಾರ್ಯದರ್ಶಿ ಅಶ್ವಲ್ ಗೌಡ, ತೀರ್ಥಹಳ್ಳಿ ವಿಧಾನಸಭಾ ಯುವ ಕಾಂಗ್ರೆಸ್ ಅಧ್ಯಕ್ಷ ಪೂರ್ಣೇಶ್ ಕೆಳಕೆರೆ, ಗ್ರಾಮೀಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರವೀಶ್ ಹೊಸಕೆರೆ, ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷ ಅಮರನಾಥ್ ಶೆಟ್ಟಿ, ಯುವ ಕಾಂಗ್ರೆಸ್ ಪ್ರಮುಖರಾದ ಫಣಿರಾಜ್ ಕಟ್ಟೇಹಕ್ಕಲು, ಜಯಕರ ಶೆಟ್ಟಿ, ಆಸೀಫ್ ಸೀಬಿನಕೆರೆ, ಸುಭಾಷ್ ಕುಲಾಲ್, ಶೋಬಿತ್ ಬಾಳಗಾರು, ನದೀಮ್ ಬೆಟ್ಟಮಕ್ಕಿ, ರಾಘವೇಂದ್ರ ಸೀಬಿನಕೆರೆ, ಪ್ರಸನ್ನ, ಧ್ರುವಕುಮಾರ್, ಮಂಜು(ಗೂಗ್ಲಿ), ನಂದ ಹಾರೇಕೊಪ್ಪ ಸೇರಿದಂತೆ ಕುಟುಂಬಸ್ಥರು ಉಪಸ್ಥಿತರಿದ್ದರು.