ಕಾಡಾನೆಗಳು ಪ್ರವಾಸ ಕೋಣಂದೂರಿಗೆ…

ಶರಾವತಿ ಕಾಲೇಜಿಗೆ ಸೇರಿದ ಕಾಡಾನೆಗಳು

ತೀರ್ಥಹಳ್ಳಿ ತಾಲ್ಲೂಕಿನಾದ್ಯಂತ ಪ್ರವಾಸ ಕೈಗೊಂಡಿರುವ ಎರಡು ಕಾಡಾನೆಗಳು ಬುಧವಾರ ರಾತ್ರಿ ಹಲುಸಾಲೆ ಗ್ರಾಮದಿಂದ ಹೊರಟಿದ್ದು ಗುರುವಾರ ಕೋಣಂದೂರಿನ ಶರಾವತಿ ಪ್ರಥಮ ದರ್ಜೆ ಕಾಲೇಜು ಹಿಂಭಾಗದ ಕೆರೆಯ ಸಮೀಪ ಕಾಣಿಸಿಕೊಂಡಿದೆ.

ಅರಣ್ಯ ಇಲಾಖೆ ಸಿಬ್ಬಂದಿಗಳು ಕಾಡಾನೆ ಓಡಿಸುವ ನಿಟ್ಟಿನಲ್ಲಿ ಹರಸಾಹಸ ಪಡುತ್ತಿದ್ದು ಪಟಾಕಿಗಳನ್ನು ಹೊಡೆಯುವ ಮೂಲಕ ಆನೆಯನ್ನು ಕಾಡಿಗೆ ಹಿಮ್ಮೆಟ್ಟಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಆದರೆ ಇಲಾಖೆಯ ಕಣ್ಣು ತಪ್ಪಿಸಿ ಕೋಣಂದೂರಿಗೆ ಬಂದಿದ್ದು ಅಲ್ಲಿಯೇ ಬೆಳಿಗ್ಗೆಯಿಂದ ವಿಶ್ರಾಂತಿ ಪಡೆಯುತ್ತಿವೆ. ದಸರಾ ಮುಗಿಯುವವರೆಗೆ ತೀರ್ಥಹಳ್ಳಿಯ ಪ್ರವಾಸ ಮುಗಿಸಿ ಸಾರ್ವಜನಿಕರೊಂದಿಗೆ ಹೇಗೆ ವರ್ತಿಸಬೇಕೆಂಬ ತಾಲೀಮು ಪಡೆದುಕೊಂಡು ವಿಜಯದಶಮಿಗೆ ದಸರಾ ಮೆರವಣಿಗೆಯಲ್ಲಿ ಪಾಲ್ಗೊಳ್ಳಬಹುದು ಎಂಬ ತಮಾಷೆ ಹಳ್ಳಿ ಭಾಗದ ಜನರಿಂದ ಕೇಳಿ ಬರುತ್ತಿದೆ.





ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post