ರಂಜದಕಟ್ಟೆ ಚಾಮುಂಡೇಶ್ವರಿ ದೇವಾಲಯಕ್ಕೆ ಗರುಡಗಂಬದ ಪಯಣ

ಆಕರ್ಷಕವಾಗಿ ನಿರ್ಮಿಸಿರುವ ಶಿಲ್ಪಿಗಳಾದ ಜಗದೀಶ್‌, ಮಣಿಕಂಠ
ಶೀಘ್ರದಲ್ಲೇ ದೇವಾಯಲದ ಎದುರು ಸ್ಥಾಪನೆ

ತೀರ್ಥಹಳ್ಳಿ ತಾಲ್ಲೂಕಿನ ರಂಜದಕಟ್ಟೆ ಚಾಮುಂಡೇಶ್ವರಿ, ಹೊನ್ನತ್ತಮ, ಗುಳ್ಳೆಮಾರಿಯಮ್ಮ ದೇವಸ್ಥಾನದಲ್ಲಿ ಸ್ಥಾಪನೆಗೊಳ್ಳಲಿರುವ ಗುರುಡಗಂಭ ಮಂಗಳವಾರ ದೇವಸ್ಥಾನದ ಪ್ರಾಂಗಣವನ್ನು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪ್ರವೇಶಿಸಿತು. ಕುರುವಳ್ಳಿಯ ಶಿಲ್ಪಕಲಾ ಕೇಂದ್ರದಲ್ಲಿ ಆಕರ್ಷಕ ಕೆತ್ತನೆಗಳಿಂದ ಶಿಲ್ಪಿ ಜಗದೀಶ್‌ ಮತ್ತು ಸಹೋದರ ಮಣಿಕಂಠ ರೂಪಿಸಿರುವ 29 ಅಡಿ ಉದ್ದದ ಕಲಾತ್ಮಕ ಗರುಡಗಂಬವನ್ನು ನೂರಾರು ಭಕ್ತಾದಿಗಳು, ದೇವಸ್ಥಾನ ಸಮಿತಿಯ ಪದಾಧಿಕಾರಿಗಳು ವಾದ್ಯ ಮೇಳಗಳೊಂದಿಗೆ ಶಾಸ್ತ್ರೋಕ್ತವಾಗಿ ಪೂಜೆ ಸಲ್ಲಿಸಿದ ಬಳಿಕ ಮೆರವಣಿಗೆಯ ಮೂಲಕ ತೆಗೆದುಕೊಳ್ಳಲಾಯಿತು.

ವಿಜಯದಶಮಿಯ ಆರಂಭದ ದಿನವಾದ ಮಂಗಳವಾರ ದೇವಾಲಯವನ್ನು ಪ್ರವೇಶಿಸಿದ ಗರುಡಗಂಬಕ್ಕೆ ಶಾಸ್ತ್ರೋಕ್ತವಾಗಿ ಪೂಜೆ ಸಲ್ಲಿಸಲಾಯಿತು. ನವರಾತ್ರಿಯಂದು 9 ದಿನಗಳ ಕಾಲ ದೇವಾಲಯದಲ್ಲಿ ಸಂಪ್ರದಾಯದಂತೆ ಪೂಜಾ ವಿಧಿ ವಿಧಾನಗಳು ನಡೆಯಲಿದ್ದು ಸಾರ್ವಜನಿಕರು ತನುಮನ ಧನ ಸಹಕಾರ ನೀಡಿ ಸಹಕರಿಸುವಂತೆ ಅಧ್ಯಕ್ಷ ಪ್ರವೀಣ್‌ ಹಾಗೂ ಪ್ರಧಾನ ಕಾರ್ಯದರ್ಶಿ ರಾಜೇಶ್‌ ಸಮಿತಿ ಪರವಾಗಿ ಕೋರಿದ್ದಾರೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post