ದಾರಿ ಬದಲಾಯಿಸಿದ ಎರಡು ಕಾಡಾನೆಗಳು

ಬೆಜ್ಜವಳ್ಳಿ ದಾಟಿ ವಿರೂಪಾಪುರ ತಲುಪಿದ ಆನೆಗಳು
ಹೆದ್ದೂರು, ಕೊನೇರಿಪುರ, ಮಹಿಷಿ, ಬೆಜ್ಜವಳ್ಳಿ, ವಿರೂಪಾಪುರ ರೈಟ್... ರೈಟ್...

ತೀರ್ಥಹಳ್ಳಿ ಪಟ್ಟಣಕ್ಕೆ ಆಗಮಿಸಿದ್ದ ಎರಡು ಕಾಡಾನೆಗಳು ತಾಲ್ಲೂಕಿನ ಪ್ರವಾಸದಲ್ಲಿದೆ. ಹೆದ್ದೂರಿನಲ್ಲಿ ಸೋಮವಾರ ವಿಶ್ರಾಂತಿ ಪಡೆದು ರಾತ್ರಿ ಸಂಚಾರ ಪುನರ್ ಆರಂಭಿಸಿದೆ. ಬೆಳಿಗ್ಗೆ ಅರಣ್ಯ ಸಿಬ್ಬಂದಿಗಳ ಕಣ್ಣು ತಪ್ಪಿಸಿ ಮಹಿಷಿ, ಬೆಜ್ಜವಳ್ಳಿ ಮಾರ್ಗವಾಗಿ ವಿರೂಪಾಪುರ ಗ್ರಾಮಕ್ಕೆ ತೆರಳಿವೆ.

ತ್ರಿಯಂಬಕಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿರೂಪಾಪುರ ಗ್ರಾಮದಲ್ಲಿ ಆನೆಯ ಹೆಜ್ಜೆಗಳು, ಲದ್ದಿಗಳು ಕಾಣಿಸಿಕೊಂಡಿದ್ದು ಎಲ್ಲಿ ವಿಶ್ರಾಂತಿ ಪಡೆದಿವೆ ಎಂಬ ಬಗ್ಗೆ ಮಾಹಿತಿ ಲಭಿಸಿಲ್ಲ. ಒಟ್ಟಿನಲ್ಲಿ ಶೇಡ್ಗಾರು ಮಾರ್ಗವಾಗಿ ತೀರ್ಥಹಳ್ಳಿ ಪ್ರವೇಶಿದ ಕಾಡಾನೆ ಇದೀಗ ಮುತ್ತೂರು, ಕಸಬಾ ಹೋಬಳಿ ಮುಗಿಸಿ ಇದೀಗ ಮಂಡಗದ್ದೆ, ಅಗ್ರಹಾರ ಹೋಬಳಿಗಳನ್ನು ಪ್ರವೇಶಿಸಿದೆ. ಮಂಗಳವಾರ ಅಲ್ಲಿ ವಿಶ್ರಾಂತಿ ಪಡೆದ ನಂತರ ಮತ್ತೆಲ್ಲಿ ಹೋಗಲಿದೆ ಎಂದು ಕಾದು ನೋಡಬೇಕಿದೆ. ಶೆಟ್ಟಿಹಳ್ಳಿ ಅಭಯಾರಣ್ಯ ಸೇರಲಿದೆಯಾ ಅಥವಾ ಭದ್ರಾ ಅಭಯಾರಣ್ಯಕ್ಕೆ ಕಳುಹಿಸುವ ಪ್ರಯತ್ನ ನಡೆಯಲಿದೆಯಾ ಎಂಬ ಬಗ್ಗೆ ಇನ್ನಷ್ಟು ಸ್ಪಷ್ಟನೆ ಬೇಕಾಗಿದೆ.


ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post