ತಪ್ಪು ತಿದ್ದಿಕೊಂಡು ಮುನ್ನಡೆಯುವುದೇ ವಿಕಾಸ

ಆತ್ಮವಿಮರ್ಶೆಯ ಹಾದಿಯೇ ಬುದ್ಧನ ನಂತರ ಗಾಂಧಿಯನ್ನು ಜಗತ್ತಿನ ದೊಡ್ಡ ದಾರ್ಶನಿಕನನ್ನಾಗಿ ರೂಪಿಸಿತು
ವಿಶ್ರಾಂತ ಪ್ರಾಧ್ಯಾಪಕ ಡಾ.ಬಿ.ಎಂ ಜಯಶೀಲ

ತಪ್ಪುಗಳನ್ನು ಮಾಡುವುದು ಮನುಷ್ಯಸಹಜ. ಆದರೆ ಆ ತಪ್ಪುಗಳನ್ನು ತಿದ್ದಿಕೊಂಡು ಮುನ್ನಡೆಯುವುದೇ ವಿಕಾಸ. ಗಾಂಧಿ ಹೀಗೆ ತನ್ನ ತಪ್ಪುಗಳನ್ನು ಸ್ವತಃ ಅರಿತು ತಿದ್ದಿಕೊಂಡು ವಿಕಾಸಗೊಂಡರು. ಅದನ್ನು ಮುಕ್ತವಾಗಿ ಹಂಚಿಕೊಂಡರು. ಹೊರನೋಟಕ್ಕೆ ಸರಳವೆನಿಸುವ ಈ ಆತ್ಮವಿಮರ್ಶೆಯ ಹಾದಿಯೇ ಬುದ್ಧನ ನಂತರ ಗಾಂಧಿಯನ್ನು ಜಗತ್ತಿನ ದೊಡ್ಡ ದಾರ್ಶನಿಕನನ್ನಾಗಿ ರೂಪಿಸಿತು ಎಂದು ವಿಶ್ರಾಂತ ಪ್ರಾಧ್ಯಾಪಕ ಡಾ.ಬಿ.ಎಂ.ಜಯಶೀಲ ಅವರು ತಿಳಿಸಿದರು.

ಹರಳಿಮಠದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮದಲ್ಲಿ ಗ್ರಾಮದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸರ್ಜಾಹಿರಿಯಣ್ಣಪ್ಪ ಪ್ರತಿಭಾ ಪುರಸ್ಕಾರ ಪ್ರಧಾನ ಮಾಡಿ ಅವರು ಮಾತನಾಡುತ್ತಿದ್ದರು.

ಗಾಂಧಿಯ ತತ್ವಗಳು ಎಲ್ಲರಿಗೂ ಪ್ರಿಯ. ಆದರೆ ಅದರ ಪಾಲನೆ ಅತ್ಯಂತ ಕಡಿಮೆ. ಗಾಂಧಿ ಒಂದು ವೇಳೆ ಪ್ರಧಾನಿಯಾಗಿದ್ದರೆ ಹೇಗಿರುತ್ತಿದ್ದರು ಎನ್ನುವುದಕ್ಕೆ ಗಾಂಧಿ ಜನಿಸಿದ ದಿನದಂದೇ ಹುಟ್ಟಿದ ಪ್ರಧಾನಮಂತ್ರಿಯಾಗಿ ಸರಳತೆ, ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದ ಲಾಲ್ ಬಹದ್ದೂರ್ ಶಾಸ್ತ್ರಿ ಅವರಿದ್ದರು ಎಂದು ಅವರು ಅಭಿಪ್ರಾಯಪಟ್ಟರು.

ಡಾ. ಸರ್ಜಾಶಂಕರ್ ಹರಳಿಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಶಿಕ್ಷಕ ರಮೇಶ್, ಊರ ಪ್ರಮುಖರಾದ ಶ್ರೀಮತಿ ನಾಗರತ್ನ,   ಪ್ರದೀಪ್, ಯಾಕೂಬ್   ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಮುಖ್ಯೋಪಾಧ್ಯಾಯರಾದ ಜಯಪ್ಪ ಸ್ವಾಗತಿಸಿದರು ಶಿಕ್ಷಕ ನಾಗಪ್ಪ ನಿರೂಪಿಸಿ ವಂದಿಸಿದರು.

5ನೇ ತರಗತಿಯಲ್ಲಿ ಕು. ಸ್ವಸ್ತಿಕ್, ೧೦ನೇ ತರಗತಿಯಲ್ಲಿ ಕು.ಅಂಶು ಎಚ್.ಎಂ, ಕು.ಸಂಜನಾ ಕೆ.ಆರ್, ಕು.ಅಫೀಜ್ ಎಚ್.ಎ 32ನೇ ವರ್ಷದ ಸರ್ಜಾಹಿರಿಯಣ್ಣಪ್ಪ ಪ್ರತಿಭಾ ಪುರಸ್ಕಾರಕ್ಕೆ ಪಾತ್ರರಾದರು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post