ಟಿಎಪಿಸಿಎಂಎಸ್‌ ಚುನಾವಣೆ ಭಿನ್ನಮತ ಸ್ಪೋಟ

ಬಿಜೆಪಿ ನಿಷ್ಟರಿಗೆ ಸಿಗದ ಮನ್ನಣೆ
ಮಂಗಳಗೋಪಿ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಭಿನ್ನಾಭಿಪ್ರಾಯ

ತೀರ್ಥಹಳ್ಳಿ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಚುನಾವಣೆ ಕಣ ರಂಗೇರಿದೆ. ಬಿಜೆಪಿ ಪಕ್ಷದ ವತಿಯಿಂದ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಕೆಗೆ ಸಿದ್ಧತೆ ನಡೆದಿದೆ. ಈ ನಡುವೆ ಬಿಜೆಪಿ ಪಕ್ಷದ ಆಂತರಿಕ ಮಟ್ಟದಲ್ಲಿ ಟಿಕೆಟ್‌ ಹಂಚಿಕೆ ಕುರಿತು ಭಿನ್ನಾಭಿಪ್ರಾಯ ಸ್ಪೋಟಗೊಂಡಿದೆ.

ಇತ್ತೀಚೆಗಷ್ಟೆ ಕಾಂಗ್ರೆಸ್‌ ತೊರೆದು ಬಿಜೆಪಿಗೆ ಆಗಮಿಸಿದ್ದ ಮಂಗಳಗೋಪಿಗೆ ಟಿಕೆಟ್‌ ನೀಡಿದ್ದು ಹಲವು ಬಿಜೆಪಿ ನಿಷ್ಟರ ಕೆಂಗಣ್ಣಿಗೆ ಗುರಿಯಾಗಿದೆ. ನಾವು ಅನೇಕ ವರ್ಷಗಳಿಂದ ಬಿಜೆಪಿ ಪಕ್ಷದ ಸಂಘಟನೆಯಲ್ಲಿ ತೊಡಗಿಕೊಂಡಿದ್ದೇವೆ. ಇದೀಗ ನಿನ್ನೆಮೊನ್ನೆ ಬಂದವರಿಗೆ ಪಕ್ಷ ಮಣೆ ಹಾಕುತ್ತಿರುವುದು ಎಷ್ಟು ಸರಿ. ಇದು ಪಕ್ಷ ನಿಷ್ಟರಿಗೆ ಬೇಸರ ತರಿಸುವ ಸಂಗತಿಯಾಗಿದ್ದು ಪಕ್ಷ ನಿಷ್ಟೆಗೆ ಬೆಲೆ ಇಲ್ಲವೇ ಎಂಬ ಅಭಿಪ್ರಾಯ ಬಿಜೆಪಿ ಟಿಕೆಟ್‌ ಆಕಾಂಕ್ಷಿಗಳ ವಲಯದಲ್ಲಿ ವ್ಯಾಪಕವಾಗಿ ಅಸಮಧಾನದ ಅಲೆ ಎಬ್ಬಿಸಿದೆ.

ಕೋಣಂದೂರು ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದ ಮಂಗಳಗೋಪಿ ಕಾಂಗ್ರೆಸ್‌ ಪಕ್ಷದಿಂದ ಹಾಲಿ ಟಿಎಪಿಸಿಎಂಎಸ್‌ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದು ಕೆಲವು ದಿನಗಳ ಹಿಂದಷ್ಟೇ ಶಾಸಕ ಆರಗ ಜ್ಞಾನೇಂದ್ರ ಸಮ್ಮುಖದಲ್ಲಿ ಬಿಜೆಪಿಗೆ ವಾಪಾಸ್ಸು ಬಂದಿದ್ದರು. ಅವರಿಗೆ ತಕ್ಷಣವೆ ಬಿಜೆಪಿ ಪಕ್ಷ ಟಿಎಪಿಸಿಎಂಎಸ್‌ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುತ್ತಿರುವುದು ಎಷ್ಟು ಸರಿ. ನಾವೆಲ್ಲಾ ಇರುವುದು ಕೇವಲ ಬಿಜೆಪಿ ಪಕ್ಷದ ಸಂಘಟನೆಗಾಗಿ ಮಾತ್ರವೇ ಎಂದು ಆಕ್ರೋಶ ವ್ಯಕ್ತಪಡಿಸುತ್ತಿರುವ ಕಟ್ಟಾ ಬಿಜೆಪಿ ಮುಖಂಡರುಗಳು ನಮಗೆಲ್ಲಾ ಟಿಕೆಟ್‌ ನೀಡಬೇಕೆಂಬ ಕಿಂಚಿತ್ತೂ ಯೋಚನೆಗಳು ಬಿಜೆಪಿ ಪಕ್ಷಕ್ಕೆ ಇಲ್ಲವೇ ಎಂದು ಪ್ರಶ್ನೆಸುತ್ತಿದ್ದಾರೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post