ಅಕ್ಟೋಬರ್ 2 ಗಾಂಧಿ ಜಯಂತಿ ದಿನದಂದು ಲಯನ್ಸ್ ಕ್ಲಬ್ ತೀರ್ಥಹಳ್ಳಿ ವತಿಯಿಂದ ಲಯನ್ಸ್ ಭವನದಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಿಸಲಾಯಿತು. ಲಯನ್ಸ್ ಕ್ಲಬ್ ಅಧ್ಯಕ್ಷ ಶ್ರೀಕಾಂತ್ ಭಟ್ ಅಧ್ಯಕ್ಷತೆ ವಹಿಸಿಕೊಂಡು ಸರ್ವರನ್ನು ಸ್ವಾಗತಿಸಿ ಮಾತನಾಡುತ್ತಾ ವಿಶ್ವಸಂಸ್ಥೆ ಮಹಾತ್ಮ ಗಾಂಧೀಜಿಯವರಿಗೆ ಸಿಕ್ಕ ಗೌರವ ಮತ್ತು ಅವರ ತತ್ವ ಸಿದ್ಧಾಂತಗಳನ್ನು ಪ್ರಪಂಚದ ಬೇರೆ ಬೇರೆ ದೇಶಗಳಿಗೆ ಅಗತ್ಯವಿರುವ ಬಗ್ಗೆ ವಿಶ್ವಸಂಸ್ಥೆ ತೆಗೆದುಕೊಂಡ ನಿರ್ಣಯವನ್ನು ಪ್ರಸ್ತಾಪಿಸಿದರು. ಹಾಗೆಯೇ ಪ್ರಧಾನಿಯಾದಾಗ ಲಾಲ್ ಬಹದ್ದೂರ್ ಶಾಸ್ತ್ರಿಯವರು ಜೈ ಜವಾನ್ ಜೈ ಕಿಸಾನ್ ಘೋಷಣೆಯೊಂದಿಗೆ ಕಾರ್ಮಿಕರಿಗೆ ಮತ್ತೆ ರೈತರಿಗೆ ಸಿಕ್ಕ ಗೌರವದ ಬಗ್ಗೆ ಮಾತನಾಡಿದರು, ಕೊನೆಯಲ್ಲಿ ಲಯನ್ಸ್ ಕ್ಲಬ್ ಕಾರ್ಯದರ್ಶಿ ಲಿಂಗರಾಜ್ ಸಭೆಯಲ್ಲಿ ಭಾಗವಹಿಸಿದ ಎಲ್ಲರಿಗೂ ವಂದನೆಗಳನ್ನು ಸಲ್ಲಿಸಿದರು. ನಂತರ ಸಿಹಿ ವಿತರಣೆ ಮಾಡಲಾಯಿತು.

