ಅಧ್ಯಕ್ಷರಾಗಿ ಹಾರೋಗೊಳಿಗೆ ಸವೀನ್ ಆಯ್ಕೆ
ಅಸೋಸಿಯೇಶನ್ ಆಫ್ ಕನ್ಸಲ್ಟಿಂಗ್ సివిಲ್ ಎಂಜಿನಿಯರ್ಸ್ ಬೆಂಗಳೂರು ಕೇಂದ್ರದ ಅಧ್ಯಕ್ಷರಾಗಿ ಹಾರೋಗೊಳಿಗೆ ಸವೀನ್ ಆಯ್ಕೆಯಾಗಿದ್ದಾರೆ.
ಸುಮಾರು 40 ವರ್ಷಗಳ ಹಿನ್ನೆಲೆ ಹೊಂದಿರುವ ಅಸೋಸಿಯೇಷನ್ಗೆ ಹೊಸ ಪದಾಧಿಕಾರಿಗಳ ಆಯ್ಕೆ ನಡೆದಿದ್ದು, ತೀರ್ಥಹಳ್ಳಿ ಮೂಲದ ಇಂಜಿನಿಯರ್ ಸವೀನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಕಾರ್ಯದರ್ಶಿಯಾಗಿ ಅನಿರುದ್ ಎಸ್.ಬಿ. ಖಜಾಂಚಿಯಾಗಿ ಆರ್.ವೆಂಕಟೇಶ್ ಬಾಬು ಆಯ್ಕೆಯಾಗಿದ್ದಾರೆ.
1985 ರಲ್ಲಿ ಆರಂಭವಾದ ಅಸೋಸಿಯೇಶನ್ಸ್ ಆಫ್ ಕನ್ಸಲ್ಟಿಂಗ್ ಸಿವಿಲ್ ಎಂಜಿನಿಯರ್ಸ್ ಸಂಸ್ಥೆಯು ಬೆಂಗಳೂರಿನಲ್ಲಿ ಕೇಂದ್ರ ಕಚೇರಿಯನ್ನು ಹೊಂದಿದೆ. ಇದು ದೇಶಾದ್ಯಂತ ಸುಮಾರು 51 ಕೇಂದ್ರಗಳನ್ನು ಹೊಂದಿದೆ. ಇದು ಭಾರತದಲ್ಲಿ ಅಸ್ತಿತ್ವದಲ್ಲಿರುವ ಸಿವಿಲ್ ಇಂಜಿನಿಯರ್ ಗಳ ಅತಿ ದೊಡ್ಡ ವೃತ್ತಿಪರ ಸಂಸ್ಥೆ ಎಂಬ ಹೆಗಳಿಕೆಯನ್ನೂ ಹೊಂದಿದೆ. ಈ ಸಂಸ್ಥೆಯ ನೇತೃತ್ವವನ್ನು ಈಗ ಸವೀನ್ ವಹಿಸಿಕೊಳ್ಳುತ್ತಿದ್ದಾರೆ.
ಮೂಲತಃ ತೀರ್ಥಹಳ್ಳಿ ತಾಲ್ಲೂಕಿನ ಸವೀನ್ ಬೆಂಗಳೂರಿನ ಬಿಎಂಎಸ್ ಕಾಲೇಜಿನಲ್ಲಿ ಸಿವಿಲ್ ಇಂಜಿನಿಯರಿಂಗ್ ಪದವಿ ಮುಗಿಸಿ ಸುಮಾರು 17 ವರ್ಷ ವಿವಿಧ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಕಳೆದ 5 ವರ್ಷಗಳಿಂದ ಬೆಂಗಳೂರಿನಲ್ಲಿ ತಮ್ಮದೇ ಸ್ವಂತ ಸಂಸ್ಥೆ ಕಟ್ಟಿ ಕಟ್ಟಡ ನಿರ್ಮಾಣ/ ತಾಂತ್ರಿಕ ಸಲಹೆ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ.
ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಬೆಂಗಳೂರು ಕೇಂದ್ರಕ್ಕೀಗ ಮುಂದಿನ ಎರಡು ವರ್ಷಗಳ ಅವಧಿಗೆ ಅಧ್ಯಕ್ಷರಾಗಿದ್ದು ವೃತ್ತಿಪರ ಸಂಸ್ಥೆಯನ್ನು ಮುನ್ನಡೆಸಲಿದ್ದಾರೆ. ಕೃಷಿ, ಸಾಹಿತ್ಯ, ಸಿನಿಮಾ ಕ್ಷೇತ್ರಗಳಲ್ಲಿ ವಿಶೇಷ ಆಸಕ್ತಿ ಹೊಂದಿರುವ ಅವರು, ಹಲವು ಎನ್ಜಿಒಗಳು ಹಾಗೂ ಸಾಮಾಜಿಕ ಸಂಘಟನೆಗಳಲ್ಲಿಯೂ ತಮ್ಮನ್ನು ತಾವು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.