ಡಾ.ಸರ್ಜಾಶಂಕರ ಹರಳಿಮಠಗೆ 'ಕನಕ ಸಾಹಿತ್ಯ ಪ್ರಶಸ್ತಿ"

ಕನ್ನಡ ಪ್ರಾಧ್ಯಾಪಕ ಸರ್ಜಾಶಂಕರ ಹರಳಿಮಠ ಮತ್ತೊಂದು ಗೌರವ

ಮೈಸೂರಿನ ಸನ್ವಿತಿ ಪ್ರಕಾಶನ ಸಂಸ್ಥೆಯು ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಸಾಹಿತಿ ಡಾ.ಸರ್ಜಾಶಂಕರ ಹರಳಿಮಠ ಅವರನ್ನು ರಾಜ್ಯಮಟ್ಟದ 'ಕನಕ ಸಾಹಿತ್ಯ ಪ್ರಶಸ್ತಿ'ಗೆ ಆಯ್ಕೆ ಮಾಡಿದೆ.

ಡಾ "ಬೆಚ್ಚಿ ಬೀಳಿಸಿದ ಬೆಂಗಳೂರು" ಅಂಕಣ ಪ್ರಬಂಧ ಕೃತಿಯು ಅಪಾರ ಜನಮನ್ನಣೆ ಗಳಿಸಿದ್ದು,ಎರಡು ಆವೃತ್ತಿಗಳನ್ನು ಕಂಡಿದೆ. ಪ್ರತಿಷ್ಠಿತ 'ಪ್ರಜಾವಾಣಿ ದೀಪಾವಳಿ ಕಥಾಸ್ಪರ್ಧೆ" ಸೇರಿದಂತೆ ರಾಜ್ಯಮಟ್ಟದ ವಿವಿಧ ಕಥಾಸ್ಪರ್ಧೆಗಳಲ್ಲಿ ಇವರ ಕಥೆಗಳು ಬಹುಮಾನ ಗಳಿಸಿದ್ದು,"ಬಾರಯ್ಯ ಬೆಳದಿಂಗಳೇ' ಕಥಾಸಂಕಲನ ಪ್ರಕಟವಾಗಿದೆ. ಇತ್ತೀಚೆಗೆ ಬಿಡುಗಡೆಗೊಂಡ "ಕನ್ನಡತನ" ಸಂಶೋಧನಾ ಕೃತಿ ಕನ್ನಡದ ವಿವೇಕವನ್ನು ಹೊಸಬಗೆಯಲ್ಲಿ ಕಂಡಿರಿಸಿದೆ ಎಂಬ ಅಭಿಪ್ರಾಯ ವಿಮರ್ಶಕರಿಂದ ವ್ಯಕ್ತವಾಗಿದೆ. 'ಅಂತರಾಳ'', 'ಜೀವದನಿ', 'ಸುಡುಹಗಲ ಸೊಲ್ಲು' ಸರ್ಜಾಶಂಕರ ಅವರ ಇತರ ಕೃತಿಗಳಾಗಿವೆ. ಈ ಲೇಖಕರು 'ಪ್ರಜಾವಾಣಿಯಲ್ಲಿ' ಬರೆದ 'ಉದಯವಾಯಿತು ನಮ್ಮ ಚೆಲುವ ಕನ್ನಡ ನಾಡು' ಲೇಖನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಶಸ್ತಿ ದೊರೆತಿದೆ. ಈ ಲೇಖಕರ ಸಮಗ್ರ ಸಾಹಿತ್ಯವನ್ನು ಪರಿಗಣಿಸಿ "ಕನಕ ಸಾಹಿತ್ಯ ಪ್ರಶಸ್ತಿ" ಗೆ ಆಯ್ಕೆ ಮಾಡಲಾಗಿದೆ ಎಂದು ಆಯ್ಕೆ ಸಮಿತಿ ತಿಳಿಸಿದೆ.

 ಸರ್ಜಾಶಂಕರ ಹರಳಿಮಠ ಅವರು ಪ್ರಸ್ತುತ ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸಡ್ ಸ್ಟಡೀಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post