ತೀರ್ಥಹಳ್ಳಿಯಿಂದ ಶಬರಿಮಲೆಗೆ ಕಾಲ್ನಡಿಗೆ ಯಾತ್ರೆ

6 ಕೆಜಿ ಅಯ್ಯಪ್ಪ ಪೀಠ ಹೊತ್ತು ಶಬರಿಮಲೆ ಯಾತ್ರೆ

18 ದಿನ ಕಾಲ್ನಡಿಗೆಯಲ್ಲಿ ಯಾತ್ರೆ ಮಾಡಿದ ತೀರ್ಥಹಳ್ಳಿಯ ಅಭಿಷೇಕ್ ಮತ್ತು ತಂಡ

ತೀರ್ಥಹಳ್ಳಿಯ ಕುರುವಳ್ಳಿಯ ಗೌರಿಶಂಕರ ದೇವಸ್ಥಾನದಿಂದ ಸುಮಾರು 742 ಕಿ.ಮೀ. ಕಾಲ್ನಡಿಗೆಯಲ್ಲಿ ಶಬರಿಮಲೆ ಯಾತ್ರೆಯನ್ನು ಇಲ್ಲಿನ ಅಭಿಷೇಕ್ ಮತ್ತು ತಂಡ ಪೂರ್ಣಗೊಳಿಸಿದ್ದಾರೆ.

ವಿಶೇಷವೆಂದರೆ ಗುರುಸ್ವಾಮಿಯಾಗಿರುವ ಅಭಿಷೇಕ್ ತಲೆಯ ಮೇಲೆ 6 ಕೆ.ಜಿ. ತೂಕದ ಅಯ್ಯಪ್ಪ ದೇವರ ಮೂರ್ತಿಯನ್ನು ಹೊತ್ತುಕೊಂಡು ಯಾತ್ರೆ ಮಾಡಿದ್ದಾರೆ. ಯಾತ್ರೆಗಾಗಿ ನವೆಂಬರ್ 1 ರಂದು ಹೊರಟಿರುವ ನವೆಂಬರ್ 18ಕ್ಕೆ ಶಬರಿಮಲೆ ತಲುಪಿದ್ದಾರೆ. ಮಂಡಲ ಪೂಜೆಯನ್ನು ಪೂರೈಸಿಕೊಂಡು ಹಿಂದಿರುಗಿದ್ದಾರೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post