ಕಣಗಲುಕೊಪ್ಪದಲ್ಲಿ 33 ಕೆಜಿ ಶ್ರೀಗಂಧ ವಶ

ಇಬ್ಬರು ಆರೋಪಿಗಳನ್ನು ಬಂಧಿಸಿದ ಅರಣ್ಯ ಇಲಾಖೆ
ಮಂಡಗದ್ದೆ ಆರ್‌ಎಫ್‌ಓ ವಿನಯಕುಮಾರ್‌ ನೇತೃತ್ವದಲ್ಲಿ ಕಾರ್ಯಾಚರಣೆ

ತೀರ್ಥಹಳ್ಳಿ ತಾಲ್ಲೂಕಿನ ಕಣಗಲುಕೊಪ್ಪ ಗ್ರಾಮದಲ್ಲಿ ಅಕ್ರಮವಾಗಿ 33 ಕೆಜಿ 250 ಗ್ರಾಂ ತೂಕದ ಶ್ರೀಗಂಧದ ತುಂಡುಗಳನ್ನು ಸಾಗಾಣೆಗೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಡಗದ್ದೆ ವಲಯಾರಣ್ಯಾಧಿಕಾರಿ ವಿನಯಕುಮಾರ್‌ ನೇತೃತ್ವದ ತಂಡ ಸೋಮವಾರ ಬಂಧಿಸಿದೆ.

ಮೇಲಿನ ಪಟ್ರೊಳ್ಳಿ ಗ್ರಾಮದ ಸರ್ವೆ ನಂಬರ್‌ 6 ರಲ್ಲಿ ಶ್ರೀಗಂಧದ ಮರವನ್ನು ಕಡಿತಲೆ ಮಾಡಿ ಅದರ ತುಂಡುಗಳನ್ನು ಇಬ್ಬರು ಆರೋಪಿಗಳು ಸಂಗ್ರಹಿಸಿಟ್ಟಿದ್ದರು. ತುಂಡುಗಳನ್ನು ಮಾರಾಟ ಮಾಡುವ ಉದ್ದೇಶದಿಂದ ಆರೋಪಿಗಳಾದ ಕಣಗಲುಕೊಪ್ಪದ ಸತೀಶ್‌ (32), ಪ್ರಕಾಶ್‌ (32) ಪ್ರಯತ್ನಿಸುತ್ತಿದ್ದರು.

ಖಚಿತ ಮಾಹಿತಿ ತಿಳಿದ ಮಂಡಗದ್ದೆ ವಲಯಾರಣ್ಯಾಧಿಕಾರಿ ನೇತೃತ್ವದ ತಂಡ ಸೋಮವಾರ ಕಾರ್ಯಾಚರಣೆ ನಡೆಸಿದೆ. ಕಾರ್ಯಚಾರಣೆಯಲ್ಲಿ ತುಂಡುಗಳ ಸಹಿತ ಇಬ್ಬರು ಆರೋಪಿಗಳು ಸಿಕ್ಕಿ ಬಿದ್ದಿದ್ದಾರೆ. ಇಬ್ಬರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ವಶಪಡಿಸಿಕೊಂಡಿದ್ದಾರೆ.

ಡಿಎಫ್‌ಓ ಅಜ್ಜಯ್ಯ, ಎಸಿಎಫ್‌ ಮಧುಸೂದನ್‌ ಮಾರ್ಗದರ್ಶನದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಕಾರ್ಯಚರಣೆಯಲ್ಲಿ ಡಿಆರ್‌ಎಫ್‌ಓ ಅಮಿತ್‌, ಅರಣ್ಯ ರಕ್ಷಕ ಸಿಬ್ಬಂದಿಗಳಾದ ಕಿರಣಕುಮಾರ್‌, ಮಹಾದೇವ್‌, ಚಾಲಕ ಅರುಣ್‌ ಮತ್ತಿತರರು ಇದ್ದಾರೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post