ಕ್ರಿಸ್ತ ಜಯಂತಿ ಸೌಹಾರ್ದ ಜ್ಯೂಬಿಲಿ

ನಟಮಿತ್ರರು ತಂಡದ 'ಸನ್ಮಾನ ಸುಖ' ಹಾಸ್ಯ ನಾಟಕ ಪ್ರದರ್ಶನ
ಕ್ರಿಸ್ತ ಜಯಂತಿಯ 2025 ವರ್ಷಗಳ ಮಹಾ ಜ್ಯೂಬಿಲಿ ಕಾರ್ಯಕ್ರಮದ ಅಂಗವಾಗಿ ತೀರ್ಥಹಳ್ಳಿ ಧರ್ಮಕೇಂದ್ರದ "ಸೌಹಾರ್ದ ಜ್ಯೂಬಿಲಿ" ಕಾರ್ಯಕ್ರಮ ಸಂಜೆ 5.30 ಕ್ಕೆ ಶಾಂತವೇರಿ‌ ಗೋಪಾಲಗೌಡ ರಂಗಮಂದಿರದಲ್ಲಿ ಆಯೋಜಿಸಲಾಗಿದೆ.
ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ವಿಶೇಷವಾಗಿ ನಟಮಿತ್ರರು ಹವ್ಯಾಸಿ ಕಲಾ ಬಳಗದ ತಂಡದಿಂದ ಒಂದು ಗಂಟೆಗಳ ಕಾಲ ನಕ್ಕು ನಗಿಸುವ ಹಾಸ್ಯ ನಾಟಕ "ಸನ್ಮಾನ ಸುಖ" ಪ್ರದರ್ಶನಗೊಳ್ಳಲಿದೆ.
'ಕ್ರಿಸ್ಮಸ್ ಸೌಹಾರ್ದ ಜ್ಯೂಬಿಲಿ ಕಾರ್ಯಕ್ರಮದಲ್ಲಿ ಶಾಸಕ ಆರಗ ಜ್ಞಾನೇಂದ್ರ, ಕಿಮ್ಮನೆ ರತ್ನಾಕ‌ರ್ ಹಾಗೂ ಆರ್.ಎಂ. ಮಂಜುನಾಥ ಗೌಡ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಚರ್ಚ್ ಧರ್ಮಗುರುಗಳಾದ ಫಾದರ್ ವೀರೇಶ್ ವಿಕ್ಟರ್ ಮೋರಸ್ ಉಪಸ್ಥಿತಿ ಇರಲಿದ್ದಾರೆ.
ಕಾರ್ಯಕ್ರಮಕ್ಕೆ ಸಾರ್ವಜನಿಕರು ಭಾಗವಹಿಸಬೇಕೆಂದು ಕಥೋಲಿಕ ಅಶೋಸಿಯೇಶನ್ ಅಧ್ಯಕ್ಷ ಅನಿಲ್ ಡಿಸೋಜ, ಕಾರ್ಯದರ್ಶಿ ಓವಿನ್ ಡಿಸೋಜ ಎರಡೂ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ಭಾಗವಹಿಸುವಂತೆ ಕೋರಿಕೊಂಡಿದ್ದಾರೆ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post