ಕನ್ನಂಗಿ‌ ಸಮೀಪ ಕಾಡಾನೆ ಸಂಚಾರ

ರಾತ್ರಿ ತೋಟದಲ್ಲಿ ಇಟ್ಟಿದ್ದ ಡ್ರಮ್ ಒಡೆದ ಆನೆ
ಮಾಹಿತಿ ನೀಡಿದರು ಅರಣ್ಯ ಅಧಿಕಾರಿಗಳು ಬರಲ್ಲ


ತೀರ್ಥಹಳ್ಳಿ ತಾಲ್ಲೂಕಿನ ಕನ್ನಂಗಿ ಸಮೀಪದ ಜೋಗಿಕೊಪ್ಪ, ಸಾಲೇಕೊಪ್ಪ, ಅವಲಗೆರೆ ವ್ಯಾಪ್ತಿಯಲ್ಲಿ ರಾತ್ರಿ ಒಂಟಿ ಕಾಡಾನೆ ಸಂಚಾರ ನಡೆಸಿದೆ‌. ಮನೆ ಹಾಗೂ ತೋಟಗಳಲ್ಲಿ ಸಂಚರಿಸಿರುವ ಆನೆ ಡ್ರಮ್ ಸೇರಿದಂತೆ ಬೆಳೆಗಳಿಗೆ ಹಾನಿ ಮಾಡಿದೆ.
ಈ ಬಗ್ಗೆ ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ಫೋನ್ ಮೂಲಕ ಮಾಹಿತಿ ನೀಡಿದರು ಆಯ್ತು ಹತ್ರ ಹೋಗಬೇಡಿ ಎನ್ನುತ್ತಾರೆ. ಆದ್ರೆ ಹೇಳಿದ ಸ್ಥಳಕ್ಕೆ ಬರಲ್ಲ. ಅರಣ್ಯ ಇಲಾಖೆ ಕೆಲವು ಸಿಬ್ಬಂದಿಗಳು ಬೇಜವಾಬ್ದಾರಿ ತೋರುತ್ತಿದ್ದಾರೆ. ಪ್ರಾಣ ಹಾನಿಯಾದ ಮೇಲೆ ಸ್ಥಳಕ್ಕೆ ಬರುತ್ತಾರಾ ಎಂದು ಸ್ಥಳೀಯರು ಪ್ರಶ್ನಿಸುತ್ತಿದ್ದು. ಆನೆಯನ್ನು ಸ್ಥಳದಿಂದ ಓಡೆಸಬೇಕೆಂದು ಸ್ಥಳೀಯರು ಆಗ್ರಹಿಸುತ್ತಿದ್ದಾರೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post