ಮಂಡಗದ್ದೆಯಲ್ಲಿ ಕಾರ್ಮಿಕ ಪತ್ತೆ


ನೆಲದ ಧ್ವನಿ ಫಲಶೃತಿ, ಮಾಹಿತಿ ನೀಡಿದ ಸ್ಥಳೀಯರು
ತೀರ್ಥಹಳ್ಳಿಯ ಗುಡ್ಡೇಕೊಪ್ಪದ ತೋಟವೊಂದರಲ್ಲಿ ಕೆಲಸಕ್ಕೆ ಬಂದಿದ್ದ ಬಯಲುಸೀಮೆಯೆ ಕಾರ್ಮಿಕ ಕುಮಾರ (55) ಬುಧವಾರ ಸಂಜೆ ಮಂಡಗದ್ದೆಯಲ್ಲಿ ಪತ್ತೆಯಾಗಿದ್ದಾರೆ. ನಾಪತ್ತೆಯಾದ ಬಗ್ಗೆ ನೆಲದ ಧ್ವನಿ ಸುದ್ದಿ ಭಿತ್ತರಿಸಿತ್ತು. ಸುದ್ದಿ ನೋಡಿದ ಸ್ಥಳೀಯರೊಬ್ಬರು ಕುಟುಂಬದವರಿಗೆ ಮಾಹಿತಿ ನೀಡಿದ್ದಾರೆ.

ಕಿವಿ ಕೇಳದ, ಮಾತು ಬಾರದ ಅವರು ಮಂಗಳವಾರ ಸಂಜೆಯಿಂದ ಕಾಣೆಯಾಗಿದ್ದರು. ಗುಡ್ಡೇಕೊಪ್ಪಕ್ಕೆ ವಾಪಾಸ್ಸು ದಾರಿ ಕಾಣದೆ ನಡೆದು ಹೋಗುವ ಪ್ರಯತ್ನ ನಡೆಸಿದ್ದರು. ಮಂಡಗದ್ದೆಯ ಸಮೀಪ ನಡೆದುಕೊಂಡು ಹೋಗುವಾಗ ಪತ್ತೆಯಾಗಿದ್ದಾರೆ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post