ತಾಲ್ಲೂಕು ಕಚೇರಿಗೆ ಬಿಜೆಪಿ ದಿಢೀರ್‌ ಮುತ್ತಿಗೆ

ಕಟ್ಟಿದ ಮನೆ ಕೆಡವಲು ಆದೇಶ
ತೆರವಿಗೆ ಕಾಂಗ್ರೆಸ್‌ ನಾಯಕರ ಕುಮ್ಮಕ್ಕು

ತೀರ್ಥಹಳ್ಳಿ ತಹಶೀಲ್ದಾರ್‌ ಬಡವರು ಮತ್ತು ರೈತ ವಿರೋಧಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಾಗುವಳಿ ಜಮೀನು, ವಾಸದ ಮನೆ ತೆರವು ಮಾಡುವಂತೆ ಆದೇಶ ಹೊರಡಿಸುತ್ತಿದ್ದಾರೆ. ಅವರಿಗೆ ಕಾಂಗ್ರೆಸ್‌ ನಾಯಕರುಗಳು ಕುಮ್ಮಕ್ಕು ನೀಡುತ್ತಿದ್ದಾರೆ. ಇದನ್ನು ಸಹಿಸಲಾಗದು ಎಂದು ಶುಕ್ರವಾರ ಬಿಜೆಪಿ ಕಾರ್ಯಕರ್ತರು ಶುಕ್ರವಾರ ತಾಲ್ಲೂಕು ಕಚೇರಿಗೆ ದಿಢೀರ್‌ ಮುತ್ತಿಗೆ ಶಾಸಕ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದರು.

ತಾಲೂಕು ಕಚೇರಿಯಲ್ಲಿ ಬ್ರೋಕರ್‌ ಹಾವಳಿ ಹೆಚ್ಚಾಗಿದೆ. ಕಚೇರಿ ದಾಖಲೆಗಳನ್ನು ಕಳವು ಮಾಡುತ್ತಿದ್ದಾರೆ. ಇದರ ಕುರಿತು ಎಚ್ಚರಿಕೆ ನೀಡಿದ್ದರು ಉಪಯೋಗವಾಗಿಲ್ಲ. ಹನಸ ಗ್ರಾಮದಲ್ಲಿ ಕೇವಲ 11 ಗುಂಟೆ ಜಾಗದಲ್ಲಿ ಕಟ್ಟಿದ ಮನೆಯನ್ನು ತೆರವಿಗೆ ಆದೇಶ ಮಾಡಲಾಗಿದೆ. ಸೂಕ್ತ ಮಾಹಿತಿಯನ್ನು ಪಡೆದುಕೊಳ್ಳದೆ ತಹಶೀಲ್ದಾರ್‌ ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸುತ್ತಿಲ್ಲ ಎಂದು ಅವರು ಆರೋಪಿಸಿದರು.

ಕೋಣಂದೂರು ಸಮೀಪದ ಹುಲ್ಕೋಡು ಗ್ರಾಮದಲ್ಲಿ ಬಡ ಕುಟುಂಬಕ್ಕೆ ಬಗರ್‌ಹುಕುಂ ಸಾಗುವಳಿ ಸಕ್ರಮ ಯೋಜನೆಯಡಿ ಜಮೀನು ಮಂಜೂರು ಮಾಡಲಾಗಿದೆ. ಆ ಸ್ಥಳಕ್ಕೆ ತಹಸೀಲ್ದಾರ್‌ ತೆರಳಿ ಕುಟುಂಬಕ್ಕೆ ಬೆದರಿಕೆ ಹಾಕಿದ್ದಾರೆ. ಹೀಗಾದಲ್ಲಿ ಪ್ರತಿ ದಿನ ತಾಲೂಕು ಕಚೇರಿಗೆ ಬಿಜೆಪಿ ಮುತ್ತಿಗೆ ಹಾಕುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಶಾಸಕರ ಆರಗ ಜ್ಞಾನೇಂದ್ರರ ಆರೋಪಗಳಿಗೆ ಉತ್ತರಿಸಿದ ತಹಶೀಲ್ದಾರ್‌ ರಂಜಿತ್‌, ನಾನು ಕಾನೂನು ಪ್ರಕಾರವೇ ಕೆಲಸ ಮಾಡಬೇಕಿದೆ. ಕೇಳಿದ ಪ್ರಶ್ನೆಗೆ ಕಾನೂನು ಪ್ರಕಾರವೇ ಉತ್ತರಿಸುತ್ತಿದ್ದೇನೆ. ಜಂಬುವಳ್ಳಿ ಗ್ರಾಮದಲ್ಲಿ ಯಾರಿಗೂ ಜಾಗ ಒತ್ತುವರಿಗೆ ಅವಕಾಶ ನೀಡಿಲ್ಲ. ಮೇಳಿಗೆ ಗ್ರಾಮದಲ್ಲಿ ಹೂವಪ್ಪ ನಾಯಕ್‌ ಅವರು ಸುಮಾರು 2ವರೆ ಎಕರೆ ಜಾಗ ಒತ್ತುವರಿ ಹೊಂದಿದ್ದಾರೆ. ದೂರಿನ ಹಿನ್ನೆಲೆಯಲ್ಲಿ ಕ್ರಮ ಜರುಗಿಸಲಾಗಿದೆ ಎಂದಿದ್ದಾರೆ.

ಸ್ಥಳದಲ್ಲಿ ಎರಡು ಗಂಟೆಗೂ ಹೆಚ್ಚಿನ ಕಾಲ ಬಿಗುವಿನ ವಾತಾವರಣ ಉಂಟಾಗಿತ್ತು.

ತಾಲೂಕು ಬಿಜೆಪಿ ಅಧ್ಯಕ್ಷ ಹೆದ್ದೂರು ನವೀನ್‌, ರೈತ ಮೋರ್ಚಾ ಅಧ್ಯಕ್ಷ ನಂಬಳ ಮುರುಳಿ, ಬಿಜೆಪಿ ಮುಖಂಡರಾದ ಅಶೋಕಮೂರ್ತಿ, ಸಾಲೇಕೊಪ್ಪ ರಾಮಚಂದ್ರ, ಬೇಗುವಳ್ಳಿ ಕವಿರಾಜ್‌, ರಕ್ಷಿತ್‌ ಮೇಗರವಳ್ಳಿ, ಅರುಣ್‌ಶೆಟ್ಟಿ, ಪ್ರಶಾಂತ್‌ ಕುಕ್ಕೆ, ಕುರುವಳ್ಳಿ ಪೂರ್ಣೇಶ್‌, ಕಡ್ತೂರು ಯಶಸ್ವಿ, ತಳಲೆ ಪ್ರಸಾದಶೆಟ್ಟಿ ಮುಂತಾದವರು ಇದ್ದರು.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post