ನಟಮಿತ್ರರಿಗೆ ಪಟ್ಟಣ ಪಂಚಾಯಿತಿ ವತಿಯಿಂದ ಆತ್ಮೀಯ ಸನ್ಮಾನ

ರಂಗಕಲೆಯ ಬೆಳವಣಿಗೆಗೆ ನಟಮಿತ್ರರು ತಂಡದ ಕೊಡುಗೆ ಅಪಾರ – ಡಾ.ಆರ್.ಎಂ.ಮಂಜುನಾಥ ಗೌಡ

ಕೇಂದ್ರ ಸರ್ಕಾರದ ಸಂಸ್ಕೃತಿ ಸಚಿವಾಲಯ ಆಯೋಜನೆಯ 25ನೇ ಅಂತರಾಷ್ಟ್ರೀಯ ರಂಗ ಮಹೋತ್ಸವಕ್ಕೆ ಫೆಬ್ರವರಿ 8 ರಂದು ಆಂಧ್ರಪ್ರದೇಶದ ಗುಂಟೂರಿನಲ್ಲಿ ಪ್ರದರ್ಶನ ನೀಡಲು ತೆರಳುತ್ತಿರುವ “ಆ ಊರು ಈ ಊರು” ನಾಟಕ ತಂಡಕ್ಕೆ ಪಟ್ಟಣ ಪಂಚಾಯಿತಿ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್‌.ಎಂ.ಮಂಜುನಾಥ ಗೌಡ ರಂಗಕಲೆಗೆ ಕರ್ನಾಟಕದಲ್ಲಿ ಬಹುದೊಡ್ಡ ಇತಿಹಾಸವಿದೆ. ಗುಬ್ಬಿ ವೀರಣ್ಣ, ಸುಬ್ಬಯ್ಯ ನಾಯ್ಡು, ಕೆ.ವಿ.ಸುಬ್ಬಣ್ಣ ರಂತಹ ಮಹಾನ್‌ ಪ್ರತಿಭೆಗಳು ಇಲ್ಲಿ ಈ ಕಲೆಯನ್ನು ಅರಳಿಸಿದ್ದಾರೆ. ತೀರ್ಥಹಳ್ಳಿಯಲ್ಲಿ ನಟಮಿತ್ರರು ತಂಡ ನಾಟಕ ಕಲೆಯ ಬೆಳವಣಿಗೆಗೆ ಶ್ರಮಿಸುತ್ತಿರುವುದು ಶ್ಲಾಘನೀಯ ಎಂದರು.

ಕಾರ್ಯಕ್ರಮದಲ್ಲಿ ಬಾಳೇಬೈಲು ರಾಘವೇಂದ್ರ, ಡಿ.ಎಸ್.ವಿಶ್ವನಾಥ ಶೆಟ್ಟಿ, ಮಂಜುನಾಥ ಸ್ವಾಮಿ ಮತ್ತಿತರರು ಮಾತನಾಡಿದರು.

‌ಗ್ಯಾರಂಟಿ ಸಮಿತಿ ಅಧ್ಯಕ್ಷ ನಾಬಳ ಶಚೀಂದ್ರ ಹೆಗ್ಡೆ, ಪಟ್ಟಣ ಪಂಚಾಯಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ, ಉಪಾಧ್ಯಕ್ಷೆ ಗೀತಾ ರಮೇಶ್ ಇದ್ದರು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post