ಯುವ ಕಾಂಗ್ರೆಸ್ ತೀರ್ಥಹಳ್ಳಿ ಪ್ರಶ್ನೆ??

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದ್ದಾಗಲೂ ಗ್ರಾ.ಪಂ. ಚುನಾವಣೆಗೆ ಹಿಂದೂ ಸಂಗಮವೇ..

ಒಂದು ಕಾಲದಲ್ಲಿ ಹಿಂದು ಸಮಾಜೋತ್ಸವಗಳು, ಹಿಂದೂ ಸಂಗಮಗಳು ಬಿಜೆಪಿ ಪರ ಸಂಸ್ಥೆಗಳಾದ ವಿಶ್ವಹಿಂದೂ ಪರಿಷದ್, ಭಜರಂಗದಳ ಹೆಸರಿನಲ್ಲಿ ಆಯೋಜನೆಯಾಗುತ್ತಿತ್ತು.

ಆದರೆ ಇಂದು ಭಜರಂಗದಳ ವಿಶ್ವಹಿಂದೂ ಪರಿಷತ್ ಹೆಸರಿನಲ್ಲಿ ಹಿಂದು ಸಮಾಜೋತ್ಸವಗಳನ್ನು ಆಯೋಜನೆ ಮಾಡಲಾಗುತ್ತಿಲ್ಲ, ಕಾರಣ ಬಿಜೆಪಿ ಪರ ಸಂಘಟನೆಗಳ ಹೆಸರಿನಲ್ಲಿ ಆಯೋಜನೆಗೊಳ್ಳುವ ಕಾರ್ಯಕ್ರಮಗಳಿಗೆ ತಟಸ್ಥ ಮತದಾರರು, ವ್ಯವಹಾರಸ್ಥ ಹಿಂದೂಗಳು ಭಾಗವಹಿಸುವುದಿಲ್ಲ. ತಟಸ್ಥವಾಗಿರುವ ಹಿಂದೂಗಳನ್ನು ಸೆಳೆಯಲು ಸಂಘಟನೆಗಳ‌ ಹೆಸರನ್ನು ಕೈಬಿಡಲಾಗಿದೆ ಎನ್ನಲಾಗುತ್ತಿದೆ.

ಇನ್ನೂ ಒಂದು ವಿಶೇಷತೆ ಏನೆಂದರೆ ಮುಂಚೆ ವಿಧಾನಸಭಾ ಚುನಾವಣೆ ಸಮೀಪಿಸುವಾಗ ಹಿಂದೂ ಸಮಾಜೋತ್ಸವಗಳು ಆಯೋಜನೆಗೊಳ್ಳುತ್ತಿದ್ದವು. ಆದರೆ ಈಗ ಗ್ರಾಮ ಪಂಚಾಯತಿ, ಜಿಲ್ಲಾ ಪಂಚಾಯತಿ ಚುನಾವಣೆ ಸಮೀಪಸಿದಾಗಲೂ ಹಿಂದೂ ಸಮಾಜೋತ್ಸವ ಆಯೋಜನೆಗೊಳ್ಳುತ್ತಿವೆ.

11 ವರ್ಷದಿಂದ ಕೇಂದ್ರದಲ್ಲಿ ಬಿಜೆಪಿ ಆಡಳಿತ ನಡೆಸುತ್ತಿರುವವರಿಗೆ ಗ್ರಾಮ ಪಂಚಾಯತಿಯಲ್ಲಿ ಮತ ಕೇಳಬೇಕಿದ್ದರೂ ಹಿಂದೂ ಸಮಾಜೋತ್ಸವ ನಡೆಸುವ ಅನಿವಾರ್ಯತೆ ಎದುರಾಗಿದೆ, ಅದೂ RSS 100 ಹೆಸರಿನಲ್ಲಿ...!. ಇದೊಂದು ಬಿಜೆಪಿ ಪಕ್ಷದ ಇಂದಿನ ವಿಪರ್ಯಾಸ ಎಂದು ಯುವ ಕಾಂಗ್ರೆಸ್‌ ಮುಖಂಡರಾದ ಆದರ್ಶ ಹುಂಚದಕಟ್ಟೆ, ಪೂರ್ಣೇಶ್ ಕೆಳೆಕೆರೆ, ಶ್ರೇಯಸ್ ರಾವ್, ಸೀಬಿನಕೆರೆ, ಅಮರನಾಥ್ ಶೆಟ್ಟಿ, ಅಶ್ವಲ್ ಗೌಡ, ರವೀಶ್ ಹೊಸ್ಕೆರೆ ಪ್ರಶ್ನಿಸಿದ್ದಾರೆ. 

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post