ಬಗರ್‌ ಹುಕುಂ ಸಾಗುವಳಿ ಸಕ್ರಮಕ್ಕೆ ಆಗ್ರಹ

ಹಂಗಾಮಿ ಮನೆದಳ ಪತ್ರ ಖಾಯಂಗೆ ಒತ್ತಾಯ
ಕಂದಾಯ ಸಚಿವ ಕೃಷ್ಣಬೈರೇಗೌರಿಗೆ ಮನವಿ ಸಲ್ಲಿಸಿದ ರಮೇಶ್‌ ಹೆಗ್ಡೆ

ಶಿವಮೊಗ್ಗಕ್ಕೆ ಗುರುವಾರ ಆಗಮಿಸಿದ್ದ ಕಂದಾಯ ಸಚಿವ ಕೃಷ್ಣಬೈರೇಗೌಡರನ್ನು ಭೇಟಿ ಮಾಡಿದ ಜಿಲ್ಲಾ ಕಾಂಗ್ರೆಸ್‌ ವಕ್ತಾರ ಬಿ.ಎಂ.ರಮೇಶ್‌ ಹೆಗ್ಡೆ ಭೂಮಿಗೆ ಸಂಬಂಧಿಸಿದ ಹಲವು ಸಮಸ್ಯೆಗಳನ್ನು ಸರಿ ಪಡಿಸುವಂತೆ ಮನವಿ ಸಲ್ಲಿಸಿದರು.

ಮಲೆನಾಡು ಭಾಗದ ಸೊಪ್ಪಿನಬೆಟ್ಟ, ಕಾನು ಭೂಮಿಗಳಲ್ಲಿ ಮಾಡಿರುವ ಬಗರ್ ಹುಕುಂ ಸಾಗುವಳಿಯನ್ನು ಸಕ್ರಮಗೊಳಿಸಬೇಕು.

ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಮೈಸೂರು ಲ್ಯಾಂಡ್ ರೆವೆನೂ ಕೋಡ್ 1888 ರಡಿಯಲ್ಲಿ ಮಂಜೂರು ಮಾಡಲಾದ ʼಹಂಗಾಮಿ ಮನೆದಳ ಪತ್ರʼಗಳನ್ನು ಖಾಯಂ ಗೊಳಿಸಬೇಕು.

ಶಿವಮೊಗ್ಗ ಜಿಲ್ಲೆಯ ಹೊಸನಗರ (ನಗರ ಹೋಬಳಿ) ಹಾಗೂ ಸಾಗರ ತಾಲ್ಲೂಕು ಅನೇಕ ಕಂದಾಯ ಗ್ರಾಮಗಳ ಪಹಣಿ ದಾಖಲೆಯಲ್ಲಿ (ಯಾವುದೇ ಅರಣ್ಯ ಕಾಯ್ದೆ ಅಡಿಯಲ್ಲಿ ಅರಣ್ಯವೆಂದು ಅಧಿಸೂಚನೆ ಆಗದಿದ್ದರೂ ಸಹ) ಸೂಚಿತ ಅರಣ್ಯವೆಂದು ದಾಖಲಾಗಿರುವುದ್ದನ್ನು ಕೈಬಿಡಬೇಕು.

ಕರ್ನಾಟಕ ಭೂಸುಧಾರಣೆ ಕಾಯ್ದೆ ಅಡಿಯಲ್ಲಿ 'ಅಳತೆಗೆ ಒಳಪಟ್ಟು'  ಮಂಜೂರು ಮಾಡಲಾಗಿರುವ ಭೂಮಿಗಳಲ್ಲಿ  ಪಾವತಿ ಖಾತೆ ಹಾಗೂ ಕುಟುಂಬದ ಸದ್ಯಸರಲ್ಲಿ 'ಹಿಸ್ಸಾ ಪತ್ರ' ಮಾಡಿಕೊಳ್ಳಲು 11-ಈ ನಕ್ಷೆಗೆ ವಿನಾಯತಿ ನೀಡುವಂತೆ ಒತ್ತಾಯಿಸಿದರು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post