ಮಾರ್ಚ್‌ 16ಕ್ಕೆ ಅಹಿಂದ ಸಂಘಟನೆ ಸಭೆ

ತೀರ್ಥಹಳ್ಳಿಯ ಅಹಿಂದ ವರ್ಗ ಸಂಘಟಿತರಾಗೋಣ - ಸಚಿನ್‌ ಗರಗ

ಅಹಿಂದ ವರ್ಗ ಇಂದಿಗೂ ಶೋಷಣೆಗೆ ಒಳಗಾಗಿದೆ. ಬಹುಸಂಖ್ಯಾತರಾಗಿದ್ದು ಇಂದಿಗೂ ಸಾಮಾಜಿಕ ನ್ಯಾಯ ಪಡೆಯಲು ಸಾಧ್ಯವಾಗಿಲ್ಲ. ಅಹಿಂದ ವರ್ಗ ಒಂದು ಮಾಡುವ ಉದ್ದೇಶದಿಂದ ತಾಲ್ಲೂಕು ಮಟ್ಟದ ಅಹಿಂದ ವರ್ಗಗಳ ಪ್ರಮುಖರ ಸಂಘಟನೆಯ ಸಭೆಯನ್ನು ಮಾರ್ಚ್‌ 16ರ ಸೋಮವಾರ ಬೆಳಿಗ್ಗೆ 11 ಗಂಟೆಗೆ ಮಯೂರ ಹೋಟೆಲ್‌ ಸಭಾಂಗಣದಲ್ಲಿ ಕರೆಯಲಾಗಿದೆ ಎಂದು ಮಲೆನಾಡು ಅಹಿಂದ ಸಂಘಟನಾ ವೇದಿಕೆಯ ಅಧ್ಯಕ್ಷ ಸಚಿನ್‌ ಗರಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತೀರ್ಥಹಳ್ಳಿ ಕ್ಷೇತ್ರದಾದ್ಯಂತ ಅಹಿಂದ (ಅಲ್ಪಸಂಖ್ಯಾತ, ಹಿಂದುಳಿದ, ದಲಿತರು) ಮತದಾರರು ಬಹುಸಂಖ್ಯಾತರಾಗಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಯಾವ ಪ್ರಮುಖ ಪಕ್ಷಗಳಲ್ಲಿಯೂ ಸಂಘಟನೆಯ ಕೊರತೆಯಿಂದ ಈ ವರ್ಗಗಳು ಸ್ಪರ್ಧಿಸಲು ಸಾಧ್ಯವಾಗಿಲ್ಲ. ಇಲ್ಲಿನ ರಾಜಕಾರಣಕ್ಕೆ ಅಹಿಂದ ನಾಯಕತ್ವ ಅವಶ್ಯವಾಗಿದೆ ಎಂದು ಹೇಳಿದ್ದಾರೆ.

ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯವಾಗಿ ಹಿಂದುಳಿದ ಸಮುದಾಯಗಳಿಗೆ ಅಧಿಕಾರ ಮತ್ತು ಹಕ್ಕುಗಳನ್ನು ಒದಗಿಸುವುದು ನಮ್ಮ ಸಂಘಟನೆಯ ಪ್ರಮುಖ ಉದ್ದೇಶವಾಗಿದೆ. ಅಹಿಂದ ವರ್ಗದ ನಾಯಕರು ಗುಲಾಮಿ ಮನಸ್ಥಿತಿಯಿಂದ ಹೊರಬರಬೇಕು. ಮೀಸಲಾತಿಗೆ ಸೀಮಿತವಾದ ಜಿಲ್ಲಾ, ತಾಲ್ಲೂಕು, ಗ್ರಾಮ ಪಂಚಾಯಿತಿಯಲ್ಲೇ ತೃಪ್ತಿ ಪಡದೆ ಶಾಸನ ಸಭೆಗೆ ಸೇರುವ ಕಡೆಗೆ ಗಮನ ಹರಿಸಬೇಕು ಎಂದು ಹೇಳಿದ್ದಾರೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post