ವಾಲಿಬಾಲ್: ಕರ್ನಾಟಕ ತಂಡಕ್ಕೆ ಆಯ್ಕೆಯಾದ ತೀರ್ಥಹಳ್ಳಿ ಹುಡುಗ!

ಹಾರೆಕೊಪ್ಪದ ಶಬರೀಶ್ ಗೌಡ ರಾಷ್ಟ್ರ ಮಟ್ಟದಲ್ಲಿ ಸಾಧನೆ

ಮಾರ್ಚ್‌ 15 ರಿಂದ 20ರವರೆಗೆ ನಡೆಯಲಿರುವ ರಾಷ್ಟ್ರೀಯ ಮಟ್ಟದ ಯೂಥ್ ನ್ಯಾಷನಲ್ ವಾಲಿಬಾಲ್ ಪಂದ್ಯಾವಳಿಗೆ ಶಬರೀಶ್ ಗೌಡ ಆಯ್ಕೆ ಆಗಿದ್ದಾರೆ. ಇವರು ದಬ್ಬಣಗದ್ದೆ ಸಮೀಪದ ಹಾರೆಕೊಪ್ಪದ ರಂಜಿತಾ ಜಗದೀಶ್ ದಂಪತಿ ಪುತ್ರ. ತೀರ್ಥಹಳ್ಳಿಯ ವಾಗ್ದೇವಿಯಲ್ಲಿ ಎಸ್ಎಸ್ಎಲ್ಸಿ ಓದಿದ್ದು, ಬೆಂಗಳೂರು ಜಯನಗರದ ಸುರಾನಾ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಕಾಂ ಓದುತ್ತಿದ್ದಾರೆ. ಕ್ರೀಡಾ ಇಲಾಖೆ ಇವರನ್ನು ಆಯ್ಕೆ ಮಾಡಿದ್ದು, ರಾಷ್ಟ್ರಮಟ್ಟದ ಪಂದ್ಯಾವಳಿ ಓಡಿಸ್ಸಾದಲ್ಲಿ ನಡೆಯಲಿದೆ. ಆಳ್ವಾಸ್ ಕಾಲೇಜಿನಲ್ಲಿ ತರಬೇತಿ ಪಡೆದಿದ್ದಾರೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post