ಕೆಪಿಜೆಡ್‌ ಯುವಬ್ರಿಗೇಡ್‌ - ಯುಗಾದಿ ಸಂಭ್ರಮಾಚರಣೆ

ಮೇಗರವಳ್ಳಿಯಲ್ಲಿ ನಾಳೆ ಶಿವದೂತೆ ಗುಳಿಗೆ ನಾಟಕ ಪ್ರದರ್ಶನ

ಮೇಗರವಳ್ಳಿ ಸಮೀಪದ ಕರುಣಾಪುರ ಕೆಪಿಜೆಡ್‌ ಯುವಬ್ರಿಗೇಡ್‌ ವತಿಯಿಂದ 9ನೇ ವರ್ಷದ ಯುಗಾದಿ ಸಂಭ್ರಮಾಚರಣೆ ಮಾರ್ಚ್‌ 19ರ ಗುರುವಾರ ಅದ್ದೂರಿಯಾಗಿ ಆಯೋಜಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಪ್ರತಿ ವರ್ಷ ಯುಗಾದಿಯ ಸಂದರ್ಭ ವಿಭಿನ್ನ ರೀತಿಯ ಕಾರ್ಯಕ್ರಮವನ್ನು ಕೆಪಿಜೆಡ್‌ ಯುವಬ್ರಿಗೇಡ್‌ ನಡೆಸುತ್ತಿದೆ. 9ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ವಿಜಯಕುಮಾರ್ ಕೊಡಿಯಾಲ್ ಬೈಲ್ ನಿರ್ದೇಶನದ ಅತ್ಯಂತ ಜನಪ್ರಿಯ ಮತ್ತು ದಾಖಲೆ ಸೃಷ್ಟಿಸಿದ ಶಿವದೂತೆ ಗುಳಿಗೆ ನಾಟಕ ಸಂಜೆ 7.30ಕ್ಕೆ ಪ್ರದರ್ಶನಗೊಳ್ಳಲಿದೆ. ದೈವಾರಾಧನೆ ಮತ್ತು ಗುಳಿಗನ ಪವಾಡದ ಕಥಾಹಂದರ ಹೊಂದಿರುವ ಈ ನಾಟಕ, ಕರಾವಳಿ ಕರ್ನಾಟಕದ ಸಂಸ್ಕೃತಿಯನ್ನು ಎತ್ತಿ ಹಿಡಿಯುತ್ತದೆ. ಈವರೆಗೂ ಸುಮಾರು 700ಕ್ಕೂ ಹೆಚ್ಚು ಪ್ರದರ್ಶನಗಳನ್ನು ಕಂಡಿರುವ ಇದು ರಂಗಭೂಮಿ ಇತಿಹಾಸದಲ್ಲಿ ಒಂದು ವಿಶಿಷ್ಟ ಮೈಲಿಗಲ್ಲನ್ನು ತಲುಪಿದೆ.

ಮುಖ್ಯ ಅತಿಥಿಯಾಗಿ ಥರ್ಡ್‌ ಐ ಕನ್ನಡ ವಾಹಿತಿಯ ಸಂಸ್ಥಾಪಕ ಸುಬ್ರಹ್ಮಣ್ಯ ಎಸ್‌ ಹಂಡಿಗೆ ಭಾಗವಹಿಸಲಿದ್ದಾರೆ. ಪ್ರಜ್ಞಾಭಾರತಿ ಪ್ರೌಢಶಾಲೆಯ ವ್ಯವಸ್ಥಾಪಕ ಕ್ಯಾದಿಗೆರೆ ಲೋಹಿತಾಶ್ವ ದಿಕ್ಸೂಚಿ ನುಡಿಗಳನ್ನು ಆಡಲಿದ್ದಾರೆ. ಅತಿಥಿಗಳಾದ ಆಗುಂಬೆ ಪೊಲೀಸ್‌ ಠಾಣೆಯ ಪಿಎಸ್‌ಐ ಶಿವನಗೌಡ, ವಲಯಾರಣ್ಯಾಧಿಕಾರಿ ಹೇಮಗಿರಿ ಅಂಗಡಿ, ಕಿರಿಯ ಇಂಜಿನಿಯರ್‌ ಮಂಜುನಾಥ ವಹಿಸಲಿದ್ದಾರೆ. ಯುಗಾದಿ ಸಂಭ್ರಮಾಚರಣೆ ಕಾರ್ಯಕ್ರಮ ಯಶಸ್ವಿಗೊಳಿಸಿಕೊಡಬೇಕಾಗಿ ಕೋರಿದ್ದಾರೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post