ಮೇಲಿನ ಕುರುವಳ್ಳಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ ನಾಗರಾಜ್ ಶೆಟ್ಟಿ (62) ದೀರ್ಘ ಕಾಲದ ಅನಾರೋಗ್ಯದ ಬಳಿಕ ನಿಧನರಾಗಿದ್ದಾರೆ.
ಕೆಂಚಾಂಬಾ ಲಾರಿ ಮಾಲೀಕ ಶಂಕರ್ ಶೆಟ್ಟಿ ಸಹೋದರರಲ್ಲಿ ಒಬ್ಬರಾಗಿದ್ದ ನಾಗರಾಜ್ ಶೆಟ್ಟಿ ತೀರ್ಥಹಳ್ಳಿ ಕುವೆಂಪು ವೃತ್ತದಲ್ಲಿ ರಿಕ್ಷಾ ಮಾಲೀಕ, ಚಾಲಕನಾಗಿ ಉತ್ತಮ ಹೆಸರು ಮಾಡಿದ್ದರು. ಅಲ್ಲದೆ ಗ್ರಾಮ ಪಂಚಾಯತ್ ಸದಸ್ಯನಾಗಿ ಜನಪರ ಸ್ಪಂದನೆ ಮೂಲಕ ಹೆಸರಾಗಿದ್ದರು. ಕೆಲವು ಸಮಯದ ಹಿಂದೆ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾದ ಬಳಿಕ ಅವರು ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದರು.
ಅವರು ಪತ್ನಿ, ಪುತ್ರ, ಪುತ್ರಿ, ಸಹೋದರರು, ಸಹೋದರಿಯರು ಹಾಗೂ ಅಪಾರ ಬಂಧುವರ್ಗವನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರ ನಾಳೆ ಬೆಳಿಗ್ಗೆ 10 ಗಂಟೆಗೆ ನೆರವೇರಲಿದೆ.