ರಾತ್ರಿ ಕಳ್ಳ ಸಾಗಟಕ್ಕೆ ಪಟ್ಟು ಹಿಡಿದ ದಂಧೆಕೋರರು

ಮುಲಾಜಿಲ್ಲದೆ ಟ್ರಂಚ್‌ ಹೊಡೆದು ಅಕ್ರಮ ತಡೆದ ಅರಣ್ಯ ಅಧಿಕಾರಿಗಳು
ಮಂಡಗದ್ದೆ ಡಿಆರ್‌ಎಫ್‌ಓ ಅಮಿತ್ ಎಸ್‌ ನೇತೃತ್ವದಲ್ಲಿ ಕಾರ್ಯಾಚರಣೆ

ತೀರ್ಥಹಳ್ಳಿ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 169ರ ಮಾರ್ಗ ಮಧ್ಯೆಯ ಮಂಡಗದ್ದೆ ಸಮೀಪ ಅಕ್ರಮ ಮರಳು ಸಾಗಾಣೆ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ ಎಂಬ ದೂರುಗಳ ಹಿನ್ನಲೆಯಲ್ಲಿ ಸೋಮವಾರ ಮಂಡಗದ್ದೆ ಡಿಆರ್‌ಎಫ್‌ಓ ಅಮಿತ್‌ ಎಸ್‌ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು ದಂಧೆಗಾಗಿ ಬಳಕೆಯಾಗುತ್ತಿದ್ದ ಮಾರ್ಗವನ್ನು ಸಂಪೂರ್ಣವಾಗಿ ಟ್ರಂಚ್‌ ಹೊಡೆಯುವ ಮೂಲಕ ಬಂದ್‌ ಮಾಡಲಾಗಿದೆ.

ಮಂಡಗದ್ದೆ ಪೇಟೆಯಲ್ಲಿ ಮರಳು ದಂಧೆಗೆ ಅವಕಾಶ ನೀಡಬೇಕೆಂಬ ತೀವ್ರ ಒತ್ತಡಗಳು ಕೇಳಿ ಬಂದಿತ್ತು. ಅಲ್ಲದೇ ವಿವಿಧ ರೀತಿಯ ಭಯ ಹುಟ್ಟಿಸುವ ಪ್ರಯತ್ನದ ನಡುವೆಯು ಅಮಿತ್‌ ಹಿಂದುಮುಂದು ನೋಡದೆ ಟ್ರಂಚ್‌ ಹೊಡೆಸಿದ್ದು ದಂಧೆಕೋರರ ಕೆಂಗಣ್ಣಿಗೆ ಗುರಿಯಾಗುವಂತಹ ವಾತಾವರಣ ನಿರ್ಮಾಣವಾಗಿದೆ.

ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತೆ ರಾತ್ರಿಯಲ್ಲದೆ ಹಗಲಿನಲ್ಲಿಯೂ ಪಿಕಪ್‌ ವಾಹನವನ್ನು ನದಿಗೆ ಇಳಿಸಿ ರಾಜಾರೋಷವಾಗಿ ಮರಳು ಸಾಗಿಸಲಾಗುತ್ತಿತ್ತು. ವಿಷಯ ತಿಳಿಯುತ್ತಿದಂತೆ ಲಿಂಗಾಪುರ ಗ್ರಾಮದ ಸರ್ವೆ ನಂಬರ್‌ 100ರ ಸರ್ಕಾರಿ ಸ್ಮಶಾನಕ್ಕೆ ಹೊಂದಿಕೊಂಡಿರುವ ತುಂಗಾನದಿಯಲ್ಲಿ ಮುಂಜಾನೆ ನದಿಯಲ್ಲಿ ಮರಳು ತೆಗೆಯುವಾಗ ದಿಢೀರ್‌ ದಾಳಿ ನಡೆಸಿದ್ದಾರೆ. ದಾಳಿ ನಡೆಯುತ್ತಿದ್ದಂತೆ ಪಿಕಪ್‌ ವಾಹನದ ಸಮೇತ ದಂಧೆಕೋರರು ಪರಾರಿಯಾಗಿದ್ದಾರೆ. ಸ್ಥಳದಲ್ಲಿ ಸುಮಾರು 50 ಮೂಟೆಗಳ ಮರಳು ವಶಕ್ಕೆ ಪಡೆದುಕೊಂಡಿದ್ದಾರೆ. ವಾಹನಗಳು ಸ್ಥಳಕ್ಕೆ ತೆರಳದಂತೆ ಬೃಹತ್‌ ಕಂದಕಗಳನ್ನು ನಿರ್ಮಿಸುವಲ್ಲಿ ಮಂಡಗದ್ದೆ ವಲಯಾರಣ್ಯಾಧಿಕಾರಿ ಮಾರ್ಗದರ್ಶನದಲ್ಲಿ ಉಪವಲಯ ಅರಣ್ಯಾಧಿಕಾರಿ ಅಮಿತ್‌ ಎಸ್‌, ಅರಣ್ಯ ರಕ್ಷಕ ಮಹಾದೇವ ಯಶಸ್ವಿಯಾಗಿದ್ದಾರೆ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post