ಖಡಕ್ ಅರಣ್ಯ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ

ದಂಧೆಕೋರರಿಗೆ ಸಿಂಹಸ್ವಪ್ನವಾದ ಅಧಿಕಾರಿ
ಮಾರುವೇಷದಲ್ಲಿ ಟಿಪ್ಪರ್ ಲಾರಿ ವಶಕ್ಕೆ ಪಡೆದ ಅಮಿತ್ ಎಸ್.
ಮರಳು ದಂಧೆಕೋರರಿಗೆ ಸಿಂಹಸ್ವಪ್ನವಾಗಿ ಕಾಡುತ್ತಿರುವ ಮಂಡಗದ್ದೆ ಅರಣ್ಯ ಅಧಿಕಾರಿಗಳು ಮರಳು ದಂಧೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಭರ್ಜರಿ ಕಾರ್ಯಾಚರಣೆಗೆ ಮುಂದಾಗಿದ್ದಾರೆ. ತಡರಾತ್ರಿ ಟಿಪ್ಪರ್ ಮೂಲಕ ಅಕ್ರಮ ಮರಳು ಸಾಗಿಸುವ ಖಚಿತ ಮಾಹಿತಿ ಮೇರೆಗೆ ಉಪ ವಲಯಾರಣ್ಯಾಧಿಕಾರಿ ಅಮಿತ್ ಎಸ್ ಮಾರುವೇಷದಲ್ಲಿ ಲಾರಿಯನ್ನು ಹಿಡಿಯುವ ಮೂಲಕ ದಂಧೆಗೆ ಕಡಿವಾಣ ಹಾಕಿದ್ದಾರೆ. ಮಂಡಗದ್ದೆ ಭಾಗದಲ್ಲಿ ದನ ಕಳ್ಳತನ, ಅಕ್ರಮ ಮರ ಕಡಿತಲೆ, ಸಾಗಾಟದ ವಿರುದ್ಧ ಕಠಿಣ ಕ್ರಮ ಜರುಗಿಸಿರುವ ಅವರು ಇದೀಗ ಮರಳಿನ ಅಕ್ರಮ ಜಾಡು ಬೇಧಿಸುವಲ್ಲಿ ಕಾರ್ಯ ಪ್ರವೃತ್ತರಾಗಿದ್ದಾರೆ.
ಮಂಡಗದ್ದೆಯ ಸಮೀಪದ ಮುಡುಬದಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದಾರೆ ಎಂಬ  ದೂರುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿತ್ತು. ಇಲಾಖೆಗೆ ಸ್ಥಳೀಯರಿಂದ ಖಚಿತ ಮಾಹಿತಿ ಲಭಿಸುತ್ತಿದ್ದಂತೆ ಅಮಿತ್ ಎಸ್ ಕಾರ್ಯಾಚರಣೆಗೆ ಮುಂದಾಗಿದ್ದಾರೆ. ದಂಧೆಗೆ ಕಡಿವಾಣ ಹಾಕಬೇಕೆಂಬ ನಿಟ್ಟಿನಲ್ಲಿ ವಿವಿಧ ಭಾಗದಲ್ಲಿ ರಾತ್ರಿ ಕಾರ್ಯಾಚರಣೆ ನಡೆಸಿದ್ದಾರೆ. ಮಾರುವೇಷದಲ್ಲಿ ಲಾರಿಗಳ ಆಗಮನದ ನಿರೀಕ್ಷೆಯಿಂದ ದಾಳಿ ನಡೆಸಿ ದಂಧೆಕೋರರನ್ನು ಹಿಡಿಯುವ ಜೊತೆಗೆ ಲಾರಿಯನ್ನು ಜಪ್ತಿ ಮಾಡಿ ಅರಣ್ಯ ಇಲಾಖೆಯ ಸುಪರ್ದಿಗೆ ಪಡೆದುಕೊಳ್ಳಲಾಗಿದೆ.
ಕಾರ್ಯಾಚರಣೆಯಲ್ಲಿ ಅರಣ್ಯ ರಕ್ಷಕರಾದ ಮಹಾದೇವ, ಕಿರಣ್, ವಾಹನ ಚಾಲಕ ಪ್ರವೀಣ್ ಇದ್ದರು. 
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post