ಚುನಾವಣೆ ಆಯೋಗ ನಡೆಸುತ್ತಿರುವ ಎಸ್ ಐ ಆರ್ (ವಿಶೇಷ ತೀವ್ರ ಮತ ಪರಿಷ್ಕರಣೆ ) ವಿವಾದದ ಕೇಂದ್ರ ಬಿಂದುವಾಗಿದೆ.ಇದು ಮುಸ್ಲಿಂ ಹಾಗೂ ಹಿಂದುಳಿದ ವರ್ಗಗಳ ಮತದಾನದ ಹಕ್ಕನ್ನು ನಿರಾಕರಿಸುತ್ತಿದೆ ಎಂಬುದು ಇಂಡಿಯಾ ಮೈತ್ರಿ ಕೂಟದ ಆರೋಪವಾಗಿದೆ.
ಬಿಹಾರ ಹಾಗೂ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಭಾರಿ ಅಂತರದಲ್ಲಿ ವಿಜಯ ಸಾಧಿಸಿದ ಬಳಿಕ ಎಸ್ ಐ ಆರ್ ಕುರಿತು ಬಿಜೆಪಿಯೆತರ ವಿಪಕ್ಷಗಳು ಎಚ್ಚರಿಕೆ ವಹಿಸುತ್ತಿವೆ.
ಕರ್ನಾಟಕದ ಆಡಳಿತ ಪಕ್ಷ ಕಾಂಗ್ರೆಸ್ ಇದರ ವಿರುದ್ಧ ಕಣ್ ಗಾವಲು ಸಮಿತಿ ರಚಿಸಿದೆ.
ಮಾಜಿ ಸಚಿವ ವಿನಯ್ ಕುಮಾರ ಸೊರಕೆ ಅಧ್ಯಕ್ಷರಾಗಿರುವ ಈ ಸಮಿತಿಯಲ್ಲಿ ಕಿಮ್ಮನೆ ರತ್ನಾಕರ್ ಕೆ ಪಿ ಸಿ ಸಿ ಉಪಾಧ್ಯಕ್ಷ ಬಿ ಎಲ್ ಶಂಕರ್, ವಕೀಲ, ಪತ್ರ ಕರ್ತ ಸಿ ಎಸ್ ದ್ವಾರಕನಾಥ್, ಮಾಜಿ ಸಚಿವ ಜಯ ಪ್ರಕಾಶ್ ಹೆಗಡೆ,ಎಲ್ ಹನುಮಂತಯ್ಯ, ಮಾಜಿ ಸಚಿವ ಉಗ್ರಪ್ಪ ಸೇರಿದಂತೆ 28 ಮಂದಿ ಕಾರ್ಯ ನಿರ್ವಹಿಸಲಿದ್ದಾರೆ.