ತೀರ್ಥಹಳ್ಳಿ ಕಾಂಗ್ರೆಸ್ ಮುಖಂಡರಿಂದ ಅಭಿನಂದನೆ
ನೂತನ ಕೆಪಿಸಿ ಅಧ್ಯಕ್ಷರಾಗಿ
ಆಯ್ಕೆಯಾಗಿರುವ ಎಐಸಿಸಿ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನ್ನು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ
ಹಾರೋಗೊಳಿಗೆ ಪದ್ಮನಾಭ, ಟಿ.ಎಲ್.ಸುಂದರೇಶ್, ಪಟ್ಟಣ ಪಂಚಾಯಿತಿ ನಾಮ ನಿರ್ದೇಶನ ಸದಸ್ಯ ಬಿ.ಆರ್.ರಾಘವೇಂದ್ರ
ಶೆಟ್ಟಿ, ಗ್ಯಾರಂಟಿ ಯೋಜನೆ ಅನುಷ್ಟಾನ ಸಮಿತಿ ಅಧ್ಯಕ್ಷ ನಾಬಳ ಶಚೀಂದ್ರ ಹೆಗ್ಡೆ ಇಂದು ಬೆಂಗಳೂರಿನಲ್ಲಿ
ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.
ಕೆಲವು ಕಾಲ ಇವರೊಂದಿಗೆ
ಮಾತನಾಡಿದ ಬಿ.ಕೆ.ಹರಿಪ್ರಸಾದ್ ಪಕ್ಷದ ಸಂಘಟನೆ ಮತ್ತು ಕಾಂಗ್ರೆಸ್ ಕಾರ್ಯಕ್ರಮಗಳ ಕುರಿತು ಹೆಚ್ಚಿನ
ಮುತುರ್ವಜಿ ವಹಿಸಿ ಪ್ರಚಾರ ಮಾಡಬೇಕೆಂದು ಅಭಿಪ್ರಾಯಪಟ್ಟಿದ್ದಾರೆ.
