ಪ್ರಖ್ಯಾತ ಇಎನ್‌ಟಿ ಸರ್ಜನ್ ಡಾ. ಪುರುಷೋತ್ತಮ ನಂಬಳ ನಿಧನ

ಖ್ಯಾತ ಇಎನ್‌ಟಿ ಸರ್ಜನ್ ಡಾ.ಪುರುಷೋತ್ತಮ ನಂಬಳ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಪುರುಷೋತ್ತಮ ಅವರು ಪತ್ನಿ ಗೀತಾ , ಪುತ್ರ ಅಪೊಲೊ ಆಸ್ಪತ್ರೆಯಲ್ಲಿ ಹೃದ್ರೋಗ ತಜ್ಞರಾಗಿರುವ ಡಾ. ಸಾತ್ಯಿಕಿ ನಂಬಳ ಹಾಗೂ ಪುತ್ರಿಯನ್ನು ಅಗಲಿದ್ದಾರೆ.  ಡಾ. ಪುರುಷೋತ್ತಮ ತೀರ್ಥಹಳ್ಳಿಯ ಅತ್ಯಂತ ಪ್ರತಿಷ್ಟಿತ ಹಾಗೂ ಪ್ರಸಿದ್ಧ ನಂಬಳ ಕುಟುಂಬದವರು. ರಾಜ್ಯದ ಮೇರು ನ್ಯಾಯಧೀಶರಲ್ಲಿ ಒಬ್ಬರಾಗಿದ್ದ ಎನ್.ಡಿ.ವೆಂಕಟೇಶ್‌ ಹಾಗೂ ದೇಶದ ಹೆಸರಾಂತ ರೈತ ಹೋರಾಟಗಾರ ಮತ್ತು ಕರ್ನಾಟಕ ರಾಜ್ಯ ರೈತ ಸಂಘವನ್ನು ಕಟ್ಟಿ ಬೆಳೆಸಿದವರಲ್ಲಿ ಪ್ರಮುಖರಾಗಿದ್ದ ಎನ್.ಡಿ.ಸುಂದರೇಶ್‌ ಅವರ ಸಹೋದರರು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post