ಮುರುಘರಾಜ್‌ ಹೆಗಲಿಗೆ ಕೋಣಂದೂರು ಸೀನಿಯರ್‌ ಛೇಂಬರ್‌ ಸಾರಥ್ಯ

ನಮ್ಮನಾಡು ಪತ್ರಿಕೆಯ ತೀರ್ಥಹಳ್ಳಿ ತಾಲ್ಲೂಕು ವರದಿಗಾರ ಮತ್ತು ತೀರ್ಥಹಳ್ಳಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಮುರುಘರಾಜ್‌ಗೆ ಜೆಸಿಐ ಸೀನಿಯರ್‌ ಛೇಂಬರ್‌ನ ಅಧ್ಯಕ್ಷ ಸ್ಥಾನ ಹುಡುಕಿಕೊಂಡು ಬಂದಿದೆ. ಕಾರ್ಯದರ್ಶಿಯಾಗಿ ಮಲ್ಲೇಸರ ಫೃಥ್ವಿರಾಜ್‌ ಆಯ್ಕೆಯಾಗಿದ್ದಾರೆ.

ಕಳೆದ ಮೂರು ದಶಕಗಳಿಂದ ಕೋಣಂದೂರು ಭಾಗದಲ್ಲಿ ಉತ್ತಮ ಸಂಘಟಕನಾಗಿ ಗುರುತಿಸಿಕೊಂಡಿರುವ ಮುರುಘರಾಜ್‌ ಆ ಭಾಗದ ಹಲವಾರು ಸಾಮಾಜಿಕ ಸಮಸ್ಯೆಗಳಿಗೆ ನಿಯಮಿತವಾಗಿ ಸ್ಪಂದಿಸುತ್ತಲೇ ಬಂದವರು. ಪತ್ರಿಕಾ ವಿತರಕ, ಪಿಗ್ಮಿ ಸಂಗ್ರಹಣೆ, ಎಲ್‌ಐಸಿ, ಟೈಲರಿಂಗ್‌ ಹೀಗೆ ಹತ್ತು ಹಲವು ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡರು ಪ್ರತಿಯೊಂದರಲ್ಲಿಯೂ ತಮ್ಮ ತನವನ್ನು ತೋರುತ್ತ ವಿಶಿಷ್ಟ ವ್ಯಕ್ತಿಯಾಗಿ ಆ ಭಾಗದಲ್ಲಿ ಹೆಸರು ಮಾಡಿದವರು.

ಅವರ ಪತ್ನಿ ನಾಗರತ್ನಾ ಮುರುಘರಾಜ್‌ ಕೋಣಂದೂರು ಕೂಡ ಗ್ರಾಮ ಪಂಚಾಯಿತಿ ಸದಸ್ಯರಾಗಿ ಜನಪ್ರಿಯರಾಗಿದ್ದರು. ಕೋಣಂದೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಟಿಎಪಿಸಿಎಂಎಸ್ ನಿರ್ದೇಶಕಿಯಾಗಿ ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ದಂಪತಿ ಕೋಣಂದೂರಿನಲ್ಲಿ ನಿರ್ಮಿಸಿರುವ ಗ್ರೀನ್‌ ಹಾರ್ಟ್‌ ಕೆಫೆ ಎಂಬ ಚಿಕ್ಕ ಕಾಫಿ ಕೆಫೆ ಮತ್ತು ಸಭಾಂಗಣ ವೈಶಿಷ್ಟ ಪೂರ್ಣವಾಗಿ ಗ್ರಾಹಕರನ್ನು ಆಕರ್ಷಿಸುತ್ತಿದೆ.

ಇತ್ತೀಚೆಗೆ ಸೀನಿಯರ್‌ ಛೇಂಬರ್‌ನ ಕುಮಾರ ಕುರ್ಸೆ ಹಾಗೂ ಎಲ್ಲಾ ಪದಾಧಿಕಾರಿಗಳು ಅಚ್ಚರಿಪಡುವಷ್ಟು ಸಂಖ್ಯೆಯಲ್ಲಿ ಸೇರಿದ್ದ ಕಾರ್ಯಕ್ರಮದಲ್ಲಿ ಮುರುಘರಾಜ್‌ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post