ಹಳ್ಳದಂತಾದ ಲಿಂಗಾಪುರ ಅಂಗನವಾಡಿ ಕೇಂದ್ರ
ತೀರ್ಥಹಳ್ಳಿ ತಾಲ್ಲೂಕಿನ ಮಂಡಗದ್ದೆ ಅಂಗನವಾಡಿ ಕೇಂದ್ರದ ಮುಂಭಾಗ ಬಾಕ್ಸ್ ಚರಂಡಿ ಇಲ್ಲದ ಹಿನ್ನಲೆಯಲ್ಲಿ ಊರಿನ ನೀರು ಅಂಗನವಾಡಿ ಕೇಂದ್ರದ ಮುಂಭಾಗ ಹರಿಯುವಂತಾಗಿದೆ. ಹತ್ತಾರು ಬಾರಿ ಗ್ರಾಮ ಪಂಚಾಯಿತಿಗೆ ದೂರು ನೀಡಿದರು ಆಡಳಿತ ಮಾತ್ರ ಕ್ರಮ ವಹಿಸುತ್ತಿಲ್ಲ.
ಹಳ್ಳದಂತಾದ ಅಂಗನವಾಡಿ ಕೇಂದ್ರದ ಮುಂಭಾಗದವನ್ನು ದಾಟಿ ಎಳೆಯ ಮಕ್ಕಳು ಅಂಗನವಾಡಿ ಕೇಂದ್ರಕ್ಕೆ ತೆರಳಬೇಕಾದ ಸನ್ನಿವೇಶ ನಿರ್ಮಾಣವಾಗಿದೆ. ಜೋರು ಮಳೆಯಲ್ಲಿ ಮಕ್ಕಳು ಕೇಂದ್ರಕ್ಕೆ ತೆರಳುವಾಗ ಅಥವಾ ಕಾಲುಜಾರಿ ನೀರಿಗೆ ಬಿದ್ದರೆ ಜೀವಕ್ಕೆ ಹಾನಿಯುಂಟಾಗುವ ಸನ್ನಿವೇಶ ನಿರ್ಮಾಣವಾಗಿದೆ. ಮಂಡಗದ್ದೆ ಗ್ರಾಮ ಪಂಚಾಯಿತಿ ಪಿಡಿಓ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಕ್ಕಳನ್ನು ಸುರಕ್ಷಿತವಾಗಿ ನೋಡಿಕೊಳ್ಳುತ್ತಿಲ್ಲ. ಪ್ರಾಣಪಾಯ ಇದೆ ಎಂಬ ದೂರಿಗೆ ಕವಡೇಕಾಸಿನ ಕಿಮ್ಮತ್ತು ಸಿಗುತ್ತಿಲ್ಲ. ಸತ್ತ ಮೇಲೆ ಚರಂಡಿ ಮಾಡುತ್ತೀರಾ ಎಂದು ಪೋಷಕರು ಪ್ರಶ್ನಿಸಿದ್ದಾರೆ.