“ಮೌಲ್ಯಯುತ ರಾಜಕಾರಣದ ಅನಿವಾರ್ಯತೆ” ಬಗ್ಗೆ ಕಿಮ್ಮನೆ ವಿಷಯ ಮಂಡನೆ
ಮೈಸೂರು ಜಿಲ್ಲಾ
ಕಾಂಗ್ರೆಸ್ ಸಮಿತಿಯ ಸಹಕಾರ ವಿಭಾಗದ ಜಿಲ್ಲಾ ವಾರ್ಷಿಕ ಮಹಾಸಭೆ ಜುಲೈ 18ರ ಶನಿವಾರ ಬೆಳಿಗ್ಗೆ 11
ಗಂಟೆಗೆ ಮೈಸೂರಿನ ಕಾಂಗ್ರೆಸ್ ಭವನದಲ್ಲಿ ನಡೆಯಲಿದೆ. ಸಭೆಯಲ್ಲಿ ಮೌಲ್ಯಯುತ ರಾಜಕಾರಣದ ಅನಿವಾರ್ಯತೆ
ಕುರಿತು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಿಷಯ ಮಂಡಿಸಲಿದ್ದಾರೆ.
ವಾರ್ಷಿಕ ಮಹಾಸಭೆಯನ್ನು
ಮಾಜಿ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಡಿಸಿಸಿ ಬ್ಯಾಂಕಿನ
ಅಧ್ಯಕ್ಷರಾದ ಡಾ.ಬಿ.ಜೆ.ವಿಜಯಕುಮಾರ್, ಕೆಪಿಸಿಸಿ ಸಹಕಾರ ವಿಭಾಗದ ರಾಜ್ಯಧ್ಯಕ್ಷ ಧನರಾಜ್ ತಾಳಂಪಳ್ಳಿ
ದಿಕ್ಕೂಚಿ ಭಾಷಣ ಮಾಡಲಿದ್ದಾರೆ.
