ಯುವ ಕ್ರಿಕೆಟ್ ಆಟಗಾರ್ತಿ ಆದ್ಯ ಎಸ್. ಮಾನೆ ಮಹಾರಾಣಿ ಕಪ್‌ಗೆ ಆಯ್ಕೆ

ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನ ಅಂಕನಕುಡಿಗೆ ವಾಸಿ ಹೆಸರಾಂತ ಕ್ರೀಡಾಪಟು ಕಾರ್ಗಲ್ ಗೋಪಾಲ್ ರಾವ್ ಮತ್ತು ಜಯಾ ಜಿ ರಾವ್ ಮೊಮ್ಮಗಳು, ಬೆಂಗಳೂರು ವಾಸಿ ರಮ್ಯ ಮತ್ತು ಸುಧೀರ್ ರಾವ್ ಪುತ್ರಿ ಆದ್ಯ ಎಸ್. ಮಾನೆ ಕರ್ನಾಟಕ ರಾಜ್ಯ ಮಹಾರಾಣಿ ಕ್ರಿಕೆಟ್ ಕಪ್-2026 ಕ್ಕೆ ಆಲ್ ರಂಡರ್ ಆಟಗಾರ್ತಿಯಾಗಿ ಗುಲ್ಬರ್ಗ ಮಿಸ್ಟಿಕ್ಸ್ ತಂಡಕ್ಕೆ ಆಯ್ಕೆ ಆಗಿದ್ದಾರೆ.
ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಹಿಳಾ ಕ್ರಿಕೆಟ್ ಕಪ್ 2026ರ ಹರಾಜು ಪ್ರಕ್ರಿಯಲ್ಲಿ  ಗುಲ್ಬರ್ಗ ಮಿಸ್ಟಿಕ್ಸ್ ತಂಡಕ್ಕೆ ಆಯ್ಕೆಯಾಗಿದ್ದು, ಈಕೆ ಅತ್ಯುತ್ತಮ ಲೆಗ್ ಸ್ಪಿನ್ನರ್ ಹಾಗೂ ಬ್ಯಾಟ್ಸ್ ಮನ್ ಆಗಿ ಗುರುತಿಸಿಕೊಂಡಿದ್ದಾರೆ. ಈ ಆಟಗಾರ್ತಿ ಬೆಂಗಳೂರಿನ ಪ್ರತಿಷ್ಠಿತ ಎಂ.ಸಿ.ಸಿ. ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದು, ಪ್ರತಿಭಾವಂತ ಯುವ ಕ್ರಿಕೆಟ್ ಆಟಗಾರ್ತಿಯ ಸಾಧನೆಯ ಬಗ್ಗೆ ಕ್ರೀಡಾಭಿಮಾನಿಗಳು ಅಪಾರ ನಿರೀಕ್ಷೆಯಲ್ಲಿದ್ದಾರೆ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post